ಕೆಲವು ಸೋಂಬೇರಿ ಅಧಿಕಾರಿಗಳು ತಮ್ಮ ಮನೆಗಳನ್ನು ಮಾತ್ರ ಸ್ವಚ್ಛವಾಗಿ ಕಾಪಾಡಿಕೊಳ್ಳುತ್ತಾರೆ ಆದರೆ ಸರ್ಕಾರಿ ಕಚೇರಿಗಳನ್ನು ಮಾತ್ರ ನೋಡಬಾರದ ಸ್ಥಿತಿಯಲ್ಲಿ ಇಟ್ಟುಕೊಂಡಿರುತ್ತಾರೆ. ತುಮಕೂರಿನ ಜಿಲ್ಲಾಧಿಕಾರಿ ಮತ್ತು ತಹಸಿಲ್ದಾರ್ ಕಚೇರಿ ಮುಂಭಾಗದಲ್ಲಿರುವ ಸಕಾಲ/ಭೂಮಿ ಕೇಂದ್ರದ ಕಚೇರಿಯ ಮೇಲ್ಭಾಗದಲ್ಲಿ ಸಂಪೂರ್ಣವಾಗಿ ಗಿಡಗಳು ಬೆಳೆದು ನಿಂತಿದ್ದು ಇದನ್ನು ಸ್ವಚ್ಛಗೊಳಿಸುವುದರ ಬಗ್ಗೆ ಯಾವೊಬ್ಬ ಅಧಿಕಾರಿಯ ಗಮನಹರಿಸಿರುವುದಿಲ್ಲ. ಕಟ್ಟಡದ ಮೇಲೆ ಗಿಡಮರಗಳು ಬೆಳೆದು ನಿಂತರೆ ಕಟ್ಟಡ ಶೀಥಿಲಗೊಳ್ಳುತ್ತದೆ ಹಾಗೂ ಅದರ ಆಯಸ್ಸು ಸಹ ಕಡಿಮೆಯಾಗುತ್ತದೆ ಇದು ಸರ್ಕಾರಿ ಕಚೇರಿಯಾದ ಕಾರಣ ಯಾರೊಬ್ಬರೂ ಇತ್ತ ಗಮನ ಹರಿಸದೆ ಸೋಂಬೇರಿಗಳಂತೆ ವರ್ತಿಸುತ್ತಿದ್ದಾರೆ. ಈ ಕಚೇರಿಯ ಮುಖ್ಯಸ್ಥ ನರಸಿಂಹರಾಜು ಜಿಲ್ಲಾಧ್ಯಕ್ಷ ಜಿಲ್ಲಾ ಸರಕಾರಿ ನೌಕರರ ಸಂಘ. ಈತನು ಇರುವಂತಹ ಕಚೇರಿಯ ಪರಿಸ್ಥಿತಿಯೇ ಹೀಗಿದ್ದ ಮೇಲೆ ಉಳಿದ ಸರ್ಕಾರಿ ನೌಕರರ ಕಚೇರಿಗಳ ಪರಿಸ್ಥಿತಿ ಹೇಗಿರಬಹುದು. ಇವನ ಕಚೇರಿಯನ್ನೇ ಸರಿಯಾಗಿ ಇಟ್ಟುಕೊಳ್ಳದವನು ಜಿಲ್ಲಾಧ್ಯಕ್ಷನಾಗಿ ಸರ್ಕಾರಿ ನೌಕರರಿಗೆ ಯಾವ ನೀತಿ ಪಾಠ ಮಾಡುತ್ತಾನೋ?
ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲಲ್ಲಿ ನಿಂತು ನೋಡಿದರೆ ಈ ಕಚೇರಿಯ ಮೇಲೆ ಬೆಳೆದಿರುವ ಗಿಡಗಳು ಸ್ಪಷ್ಟವಾಗಿ ಕಾಣುತ್ತವೆ ಆದರೂ ಸಹ ಜಿಲ್ಲಾಧಿಕಾರಿಗಳು ಇದನ್ನು ಸರಿಪಡಿಸಲು ಮುಂದಾಗದಿರಲು ಕಾರಣವೇನು? ಜಿಲ್ಲಾಧಿಕಾರಿಗಳು ಸಹ ಸರ್ಕಾರಿ ಕಚೇರಿ ಅಲ್ಲವಾ ಎಂದೇನಾದರೂ ನಿರ್ಲಕ್ಷ ವಹಿಸುತ್ತಿದ್ದಾರಾ?
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…