Latest

ಮದುವೆಯ ಆಸೆ ವ್ಯಕ್ತಪಡಿಸಿದ್ದಕ್ಕೆ ಮಗನನ್ನು ಹೊಡೆದು ಕೊಂದ ಮಲತಾಯಿ

ಒಡಿಶಾದ ನಯಾಗಢ ಜಿಲ್ಲೆಯ ದಾಸ್ಪಲ್ಲ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ಪಥರಾಪುಂಜ ಗ್ರಾಮದ ನಿವಾಸಿ ಬಿಜಯ್​ ಪ್ರಧಾನ್​ 35 ವರ್ಷ ವಯಸ್ಸಾಗಿತ್ತು. ಆದರೆ, ಅಂಗವೈಕಲ್ಯ ಕಾಡುತ್ತಿತ್ತು. ಇತ್ತೀಚೆಗೆ ಬಿಜೆಯ್​ ತನ್ನ ಕುಟುಂಬದ ಮುಂದೆ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದ. ಕುಟುಂಬ ಎಲ್ಲ ಸದಸ್ಯರು ಒಪ್ಪಿದ್ದರು. ಮದುವೆ ಮಾಡಿ ಆತನ ಜೀವನವನ್ನು ಭದ್ರ ಪಡಿಸಲು ಮುಂದಾಗಿದ್ದರು. ಆದರೆ, ಮಲತಾಯಿಗೆ ಇದು ಇಷ್ಟವಿರಲಿಲ್ಲ. ಒಂದು ವೇಳೆ ಮದುವೆಯಾದರೆ ಎಲ್ಲ ಆಸ್ತಿ ಆತನ ಪಾಲಾಗಬಹುದು ಎಂದು ಮದುವೆ ಮುರಿಯಲು ಪ್ರಯತ್ನಿಸುತ್ತಿದ್ದಳು.
ಆದರೆ, ಬಿಜಯ್​ ಮದುವೆ ಆಗಿ ಹೊಸ ಜೀವನ ಆರಂಭಿಸುವ ಉತ್ಸುಕದಲ್ಲಿದ್ದನು. ಆದರೆ, ಆತನಿಗೆ ಚೆನ್ನಾಗಿ ಥಳಿಸಿ, ಅನೇಕ ತಿಂಗಳವರೆಗೆ ಆಹಾರವನ್ನು ನೀಡದೆ ಮಲತಾಯಿ ಹಿಂಸೆ ನೀಡಿದ್ದಳು. ಆದಾಗ್ಯೂ ಶನಿವಾರ ರಾತ್ರಿ ಮದುವೆ ವಿಚಾರವಾಗಿ ಮತ್ತೊಮ್ಮೆ ಜಗಳ ನಡೆಯಿತು. ಈ ವೇಳೆ ಬಿಜಯ್​ಗೆ ಮಲತಾಯಿ ಮನಬಂದಂತೆ ಥಳಿಸಿದ್ದಾಳೆ. ಪರಿಣಾಮ ಬಿಜಯ್​ ಮೃತಪಟ್ಟಿದ್ದಾನೆ. ಬಿಜಯ್​ ತಂದೆ ಮತ್ತು ಮಲತಾಯಿಯ ಇಬ್ಬರು ಸ್ವಂತ ಮಕ್ಕಳು ಆಕೆಗೆ ಸಹಾಯ ಮಾಡಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಮಲಮಗನಾದ್ದರಿಂದ ಮದುವೆಯ ನಂತರ ಆಸ್ತಿಯನ್ನೆಲ್ಲ ತಮ್ಮದಾಗಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದರು. ಹೀಗಾಗಿ ಬಿಜಯ್​ ಮದುವೆಯಾಗುವುದು ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಆತನನ್ನು ಹೊಡೆದು ಕೊಲೆ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಆದರೆ, ಮಲತಾಯಿ ಆರೋಪವನ್ನು ಅಲ್ಲಗಳೆದಿದ್ದು, ಸಂಬಂಧಿಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಸದ್ಯ ಈ ಪ್ರಕರಣ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago