ಬಸವನ ಬಾಗೇವಾಡಿ ತಾಲ್ಲೂಕಿನ ಸರಕಾರಿ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಕಾಮನಕೇರಿಯಲ್ಲಿ ವಿದ್ಯಾರ್ಥಿಗಳು ಸುಮಾರು ಒಂದು ವಾರದಿಂದ ಕುಡಿಯುವ ಹಾಗೂ ಬಳಕೆಗೆ ನೀರಿನ ಸಮಸ್ಯೆ ಎದುರಿಸುತ್ತಿದ್ದು ಯಾವೊಬ್ಬ ಅಧಿಕಾರಿಯೂ ಇತ್ತ ಗಮನ ಹರಿಸದೆ ಇರುವುದು ಶೋಚನೀಯ. ವಸತಿ ನಿಲಯದಲ್ಲಿ ಸುಮಾರು 142 ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು,ಅದರಲ್ಲಿ ವಿಶೇಷವಾಗಿ ಬಡ ಮಕ್ಕಳು,ಅನಾಥ ಮಕ್ಕಳು, ದೇವದಾಸಿಯ ರ ಮಕ್ಕಳು ಹಾಗೂ ವಲಸೆ ಹೋದ ಮಕ್ಕಳು ಸುಮಾರು 10 ವರ್ಷ ಮೇಲ್ಪಟ್ಟು ಮತ್ತು 14 ವರ್ಷದ ಒಳಗಿನ 6 ರಿಂದ 9 ನೆಯ ತರಗತಿಯ ವಿದ್ಯಾರ್ಥಿಗಳು ವಾಸವಿದ್ದು ಮೊದಲಿಗೆ ಇದ್ದ ಬೋರ್ ವೆಲ್ ನ ನೀರು ಸಂಪೂರ್ಣ ಕಡಿಮೆಯಾಗಿದ್ದು. ಪ್ರತಿ ದಿನ ಮಕ್ಕಳಿಗೆ ಸ್ನಾನ ಮಾಡಲು, ಬಟ್ಟೆ ತೊಳೆಯಲು, ಅಡುಗೆ ಮಾಡಲು ಹಾಗೂ ವಿದ್ಯಾರ್ಥಿಗಳು ದಿನ ನಿತ್ಯ ಕುಡಿಯಲು ಸರಿಯಾಗಿ ನೀರಿನ ವ್ಯವಸ್ಥೆ ಇಲ್ಲದೆ ಇರುವುದು ಕಂಡು ಬಂದಿರುತ್ತದೆ. ಇದರ ಬಗ್ಗೆ ಹಲವು ಬಾರಿ ಶಾಲಾ ಮಕ್ಕಳಿಗೆ ಬೋರ್ ವೆಲ್ ವ್ಯವಸ್ಥೆ ಕಲ್ಪಿಸಲು ಹಲವು ಬಾರಿ ಗುರುಮಾತೆಯರು ಮನವಿ ಮಾಡಿಕೊಂಡಿದ್ದರು ಸಹ ಯಾವುದೇ ಪ್ರಯೋಜನ ಇನ್ನುವರೆಗೂ ಆಗಿರುವುದಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ವಸತಿ ನಿಲಯಕ್ಕೆ ಬೇಟಿ ಕೊಟ್ಟು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬುದು ಪತ್ರಿಕೆಯ ಆಶಯವಾಗಿದೆ.
ವರದಿ:ಸಂಗಪ್ಪ ಚಲವಾದಿ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…