ಮುಂಡಗೋಡ: ದಿನಾಂಕ 16 ರಂದು ಯಲ್ಲಾಪುರದಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮುಂಡಗೋಡ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಸುಳ್ಳಳ್ಳಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಬಾಲಕರ ವಿಭಾಗದಲ್ಲಿ ವಿನಾಯಕ ಬಸವಣ್ಣಿ ಪಾಟೀಲ (6ನೇ ತರಗತಿ),ಬಾಲಕಿಯರ ವಿಭಾಗದಲ್ಲಿ ಸುನಿತಾ ವಿಠ್ಠು ಯಮಕರ(7ನೇ ತರಗತಿ).
ಶಾಲಾ ಮಕ್ಕಳಿಗೆ ಪಾಠದೊಂದಿಗೆ ವಿವಿಧ ಆಟಗಳನ್ನು ಶಾಲೆಯಲ್ಲಿರುವ ಮುಖ್ಯ ಶಿಕ್ಷಕರಾದ ಶ್ರೀ ನಾರಾಯಣ ಗೊಟಗೋಡಿ,ಸಹ ಶಿಕ್ಷಕರಾದ ಶ್ರೀ ನಾಗರಾಜ ಆರ್.ಕೆ,ಅತಿಥಿ ಶಿಕ್ಷಕರಾದ ಶ್ರೀ ಶಿವಪ್ಪ ಚಿಟಗೇರಿ ಇವರುಗಳು ವಿದ್ಯಾರ್ಥಿಗಳಿಗೆ ಆಟದ ಸಂಪೂರ್ಣ ತರಬೇತಿಯನ್ನು ನೀಡುತ್ತಿದ್ದಾರೆ.
ವಿಜೇತ ಆಟಗಾರರಿಗೆ ಹಾಗೂ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಸುಳ್ಳಳ್ಳಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮದ ಎಲ್ಲಾ ನಾಗರಿಕರು, ತಾಲೂಕಿನ ಎಲ್ಲಾ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಘಟಕದ ಅಧ್ಯಕ್ಷರು ಅಭಿನಂದಿಸಿದ್ದಾರೆ.
ವರದಿ:ಮಂಜುನಾಥ ಎಫ್ ಎಚ್.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…