ಮುಂಡಗೋಡ:  ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮುಂಡಗೋಡ(ಶೈ ಜಿಲ್ಲೆ ಶಿರಸಿ) ಸಮೂಹ ಸಂಪನ್ಮೂಲ ಕೇಂದ್ರ ಚಿಗಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ 2022-23 ನೇ ಸಾಲಿನ ಚಿಗಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಕಾತೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೇಣುಕಾ ಮಾಯಣ್ಣನವರ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಕಾತೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶಿವಾಜಿ ಶಿಂದೆ ಭಾಗವಹಿಸಿದ್ದರು.ಸಿ ಆರ್ ಪಿ ಪ್ರಶಾಂತ್ ಸಾವಳಗಿ ಮಾತನಾಡಿ ಶಾಲಾ ಹಂತದಿಂದಲೇ ಮಕ್ಕಳಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಪೋಷಸಿಲು ಇಂತಹ ಕಾರ್ಯಕ್ರಮಗಳು ಅವಶ್ಯವಾಗಿದ್ದು ಇದನ್ನು ನಮ್ಮ ಇಲಾಖೆ ಮಾಡುತ್ತಿದೆ ಎಂದರು.
ಮುಖ್ಯಾಧ್ಯಾಪಕರಾದ ನಾಗರಾಜ ಕಾಮನಳ್ಳಿ ಅವರು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಹನಮಂತಪ್ಪ ಬೆಡಸಗಾಂವ ಅವರ ಸ್ಮರಣಾರ್ಥ ಶಾಲೆಗೆ ಸ್ಮಾರ್ಟ್ ಟಿವಿಯನ್ನು ದೇಣಿಗೆ ನೀಡಿದ ಕುಟುಂಬದವರಾದ ಶ್ರೀಮತಿ ಶಾಂತವ್ವ ಹನಮಂತಪ್ಪ ಬೆಡಸಗಾಂವ ಅವರನ್ನು ಸನ್ಮಾನಿಸಲಾಯಿತು.
ಊರಿನ ಹಿರಿಯರಾದ ನಿಂಗಪ್ಪ ಟೋಪೋಜಿ ಮಾತನಾಡಿದರು.
ಇಂತಹ ಕಾರ್ಯಕ್ರಮಗಳನ್ನು ಇಲಾಖೆಯಿಂದ ಬರುವ ಅನುದಾನದಲ್ಲಿ ವಿಜೃಂಭಣೆಯಿಂದ ಮಾಡುವುದು ಕಷ್ಟಸಾಧ್ಯ ಆದರೆ ಇಲ್ಲಿ ಊರಿನ ನಾಗರಿಕರೆಲ್ಲರೂ ಕೂಡಿ ತನು ಮನ ಧನ ಸಹಾಯದೊಂದಿಗೆ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದು ವಿಶೇಷವಾಗಿತ್ತು.
ಶಿಕ್ಷಕರಾದ ವೀರಯ್ಯ ಕುರಟ್ಟಿಮಠ ನಿರೂಪಿಸಿದರು,ಶಿಕ್ಷಕಿ ನಾಗರತ್ನಮ್ಮ ವಂದಿಸಿದರು.
ವರದಿ: ಮಂಜುನಾಥ ಹರಿಜನ.

error: Content is protected !!