Latest

ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಇಂತಹ ಕಾರ್ಯಕ್ರಮಗಳು ಅವಶ್ಯ: ಸಿ. ಆರ್. ಪಿ ಸಾವಳಗಿ

ಮುಂಡಗೋಡ:  ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮುಂಡಗೋಡ(ಶೈ ಜಿಲ್ಲೆ ಶಿರಸಿ) ಸಮೂಹ ಸಂಪನ್ಮೂಲ ಕೇಂದ್ರ ಚಿಗಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ 2022-23 ನೇ ಸಾಲಿನ ಚಿಗಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಕಾತೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೇಣುಕಾ ಮಾಯಣ್ಣನವರ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಕಾತೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶಿವಾಜಿ ಶಿಂದೆ ಭಾಗವಹಿಸಿದ್ದರು.ಸಿ ಆರ್ ಪಿ ಪ್ರಶಾಂತ್ ಸಾವಳಗಿ ಮಾತನಾಡಿ ಶಾಲಾ ಹಂತದಿಂದಲೇ ಮಕ್ಕಳಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಪೋಷಸಿಲು ಇಂತಹ ಕಾರ್ಯಕ್ರಮಗಳು ಅವಶ್ಯವಾಗಿದ್ದು ಇದನ್ನು ನಮ್ಮ ಇಲಾಖೆ ಮಾಡುತ್ತಿದೆ ಎಂದರು.
ಮುಖ್ಯಾಧ್ಯಾಪಕರಾದ ನಾಗರಾಜ ಕಾಮನಳ್ಳಿ ಅವರು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಹನಮಂತಪ್ಪ ಬೆಡಸಗಾಂವ ಅವರ ಸ್ಮರಣಾರ್ಥ ಶಾಲೆಗೆ ಸ್ಮಾರ್ಟ್ ಟಿವಿಯನ್ನು ದೇಣಿಗೆ ನೀಡಿದ ಕುಟುಂಬದವರಾದ ಶ್ರೀಮತಿ ಶಾಂತವ್ವ ಹನಮಂತಪ್ಪ ಬೆಡಸಗಾಂವ ಅವರನ್ನು ಸನ್ಮಾನಿಸಲಾಯಿತು.
ಊರಿನ ಹಿರಿಯರಾದ ನಿಂಗಪ್ಪ ಟೋಪೋಜಿ ಮಾತನಾಡಿದರು.
ಇಂತಹ ಕಾರ್ಯಕ್ರಮಗಳನ್ನು ಇಲಾಖೆಯಿಂದ ಬರುವ ಅನುದಾನದಲ್ಲಿ ವಿಜೃಂಭಣೆಯಿಂದ ಮಾಡುವುದು ಕಷ್ಟಸಾಧ್ಯ ಆದರೆ ಇಲ್ಲಿ ಊರಿನ ನಾಗರಿಕರೆಲ್ಲರೂ ಕೂಡಿ ತನು ಮನ ಧನ ಸಹಾಯದೊಂದಿಗೆ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದು ವಿಶೇಷವಾಗಿತ್ತು.
ಶಿಕ್ಷಕರಾದ ವೀರಯ್ಯ ಕುರಟ್ಟಿಮಠ ನಿರೂಪಿಸಿದರು,ಶಿಕ್ಷಕಿ ನಾಗರತ್ನಮ್ಮ ವಂದಿಸಿದರು.
ವರದಿ: ಮಂಜುನಾಥ ಹರಿಜನ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago