Corruption

ಜೈಲು ಪಾಲಾದ ತಾಲೂಕಾ ದಂಡಾಧಿಕಾರಿ.

ಲಂಚ ಪಡೆಯುತ್ತಿದ್ದ ಸಮಯದಲ್ಲಿ ತಗಲಾಕೊಂಡ ಚೆನ್ನಮ್ಮನ ಕಿತ್ತೂರು ತಹಸಿಲ್ದಾರ್.
ಮನೆ ಹಾಗೂ ಕಚೇರಿಯನ್ನು ಲೋಕಾಯುಕ್ತ ಪೋಲಿಸರು ಶುಕ್ರವಾರ. ತಡರಾತ್ರಿ ಜಾಲಾಡಿದ್ಧು, ಹಲವು ದಾಖಲೆಗಳು ಹಾಗೂ 10 ಲಕ್ಷಕ್ಕೂ ಅಧಿಕ ನಗದು ಪತ್ತೆಯಾಗಿದೆ ಎನ್ನಲಾಗಿದೆ.
ಶುಕ್ರವಾರ 2 ,ಲಕ್ಷ ಲಂಚ ತೆಗೆದುಕೋಳ್ಳುತ್ತಿದ್ದ ವೇಳೆ ಈ ಭ್ರಷ್ಟ ತಹಸಿಲ್ದಾರ್ ಸೋಮಲಿಂಗಪ್ಪ ಹಲಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕುಬಿದ್ದಿದ್ದಾನೆ. ಹಾಗೂ ಗುಮಾಸ್ತ ಜಿ.ಪ್ರಸನ್ನ ಇವರಿಬ್ಬರ ವಿರುದ್ಧ ಲೋಕಾಯುಕ್ತ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ ಇಬ್ಬರನ್ನು ಬೇಳಗಾವಿಗೆ ಕರೆತಂದು ಇಲ್ಲಿನ ಜೀಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿ ನಂತರ ಲೋಕಾಯುಕ್ತ ನ್ಯಾಯಾಧೀಶರ ಮನೆಗೆ ಆರೋಪಿತರನ್ನು ಕರೆದೊಯ್ದು ಅಲ್ಲಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಕರೆತಂದರು.
ಅರ್ಜಿದಾರನ ತಂದೆಗೆ ಹೃದಯಾಘಾತ: ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರ ತಾಲೂಕಿನ ಖೋದಾನಪುರ ಗ್ರಾಮದ ರೈತ ರಾಜೇಂದ್ರ ಇನಾಮದಾರ ಇವರು ತಾಲೂಕಾ ದಂಡಾಧಿಕಾರಿ ಹಾಗೂ ಗುಮಾಸ್ತ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಿದ್ದ ಹೀನ್ನಲೆಯಲ್ಲಿ ಅವರ ತಂದೆ ಭಾಪುಸಾಹೇಬ್ ಅವರು ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ತಹಸಿಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಗುಮಾಸ್ತ ಜಿ.ಪ್ರಸನ್ನ ಲೋಕಾಯುಕ್ತರ ಬಲೆಗೆ ಬಿದ್ದ ವಿಷಯ ಗ್ರಾಮದಲ್ಲಿ ಕಾಡ್ಗಿಚ್ಚಿನಂತೆ ಹರಡಿತು.ತಮ್ಮ ಜಮೀನಿನ ವಿಚಾರ ಇಷ್ಟು ದೋಡ್ಡ ಪ್ರಕರಣವಾಯಿತು ಎಂದು ಆಘಾತಗೊಂಡ ಬಾಪು ಸಾಹೇಬ್ ಅವರಿಗೆ ಶುಕ್ರವಾರ ತಡರಾತ್ರಿ 1:30. ರ ಸುಮಾರಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದರು.
ವರದಿ: ಚರಂತಯ್ಯಾ ಹಿರೇಮಠ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago