Latest

ಮೋದಿಕೇರ್ ದಂಧೆಗೆ ಗುಲಾಮರಾಗಿದ್ದ ಶಿಕ್ಷಕರು ಅಮಾನತು

ಮೋದಿಕೇರ್ ಎಂಬ ಚೈನ್ ಲಿಂಕ್ ಕಂಪನಿಯಲ್ಲಿ ಸಾಕಷ್ಟು ಶಿಕ್ಷಕರು ಕೆಲಸ ಮಾಡುತ್ತಿರುವುದಾಗಿ ಡಿಡಿಪಿಐ ರವರ ಗಮನಕ್ಕೆ ಬಂದಿದ್ದು. ಈ ವಿಚಾರವಾಗಿ 16 ಶಿಕ್ಷಕರಿಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆಯ ಬಳಿಕ 8 ಶಿಕ್ಷಕರು ಈ ಚೈನ್ ಲಿಂಕ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸಾಬೀತಾಗಿದ್ದು ಅವರನ್ನು ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ರವರು ಅಮಾನತು ಮಾಡಿದ್ದಾರೆ.
ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರವಿಕುಮಾರ್, ರಾಮಗಿರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶ್ರೀನಿವಾಸ್, ಹಿರಿಯೂರು ತಾಲೂಕು ಗುಯಿಲಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿದ್ದಮ್ಮ, ಪಾಲವನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂದ್ರಾಣಿ, ಹಿಂಡಸಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೈಲಜಾ, ಪರಮೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಂಜುಳಾ ಶ್ರೀನಿವಾಸ್, ರಂಗಪ್ಪ ಹಾಗೂ ಚಿತ್ರದುರ್ಗ ತಾಲೂಕಿನ ದೊಡ್ಡಲಘಟ್ಟದ ಸರಕಾರಿ ಪ್ರೌಢಶಾಲೆಯ ಶಿವಕುಮಾರ್ ಅಮಾನತುಗೊಂಡ ಶಿಕ್ಷಕರು.
ಇವರುಗಳು ಮಾತ್ರವಲ್ಲದೆ ಜಿಲ್ಲೆಯ ಪ್ರಾರ್ಥಮಿಕ ಹಾಗೂ ಪ್ರೌಢಶಾಲೆಯ ಸಾಕಷ್ಟು ಶಿಕ್ಷಕರುಗಳು ಚೈನ್ ಲಿಂಕ್ ಕಂಪನಿಯ ವ್ಯವಹಾರದಲ್ಲಿ ತೊಡಗಿದ್ದು, ಮಕ್ಕಳು ಭವಿಷ್ಯ ರೂಪಿಸಬೇಕಾದಂತಹ ಶಿಕ್ಷಕರುಗಳು ತಮ್ಮ ಕೆಲಸವನ್ನು ದುರುಪಯೋಗ ಪಡಿಸಿಕೊಂಡು ಚೈನ್ ಲಿಂಕ್ ಕಂಪನಿಯ ಆನ್ಲೈನ್ ಸಭೆಗಳಲ್ಲಿ ಭಾಗಿಯಾಗಿ ಅವರುಗಳು ಹೇಳಿದಂತೆಲ್ಲ ಕೇಳಿ ಆ ಕಂಪನಿಯವರ ಗುಲಾಮರಾಗಿದ್ದಾರೆ. ಇದರಿಂದ ಮಕ್ಕಳ ಭವಿಷ್ಯಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ.
ಕೇವಲ 8 ಜನರು ಮಾತ್ರವಲ್ಲದೆ ಜಿಲ್ಲೆಯಲ್ಲಿ ಮತ್ತು ನಮ್ಮ ರಾಜ್ಯದಲ್ಲಿ ಸಾಕಷ್ಟು ಶಿಕ್ಷಕರುಗಳು ಇದರ ಜಾಲಕ್ಕೆ ಬಿದ್ದು ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸುವುದನ್ನೇ ಮರೆತಿದ್ದಾರೆ ಹಾಗೂ ತಮ್ಮ ಕೆಲಸವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.  ಈ ವಿಚಾರವಾಗಿ ಭ್ರಷ್ಟರ ಬೇಟೆ ಪತ್ರಿಕೆಯು ವೆಬ್ಸೈಟ್ನಲ್ಲಿ ಕೆಲವು ತಿಂಗಳ ಹಿಂದೆಯೇ ವರದಿಯನ್ನು ಮಾಡಿತು. ಹಾಗೂ ಭ್ರಷ್ಟರ ಬೇಟೆ ಪತ್ರಿಕೆಯ ಫೆಬ್ರವರಿ 2023ರ ಸಂಚಿಕೆಯಲ್ಲಿ “ಮೋದಿಕೇರ್ ದಂದೆಗೆ ಗುಲಾಮರಾದ ಶಿಕ್ಷಕರು” ಎಂಬ ಶೀರ್ಷಿಕೆ ಅಡಿಯಲ್ಲಿ ವರದಿಯನ್ನು ಸಹ ಪ್ರಕಟಿಸಿರುತ್ತದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಇವರುಗಳ ವಿರುದ್ಧವು ಸಹ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಿದೆ.

 

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago