Latest

ಬಸ್ ಅವ್ಯವಸ್ಥೆ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಪರದಾಟ

ಗ್ರಾಮೀಣ ಭಾಗದ ಜನರು. ವಿದ್ಯಾರ್ಥಿಗಳು ಶಿಕ್ಷಣ ಪಡಿಯಬೇಕೆಂದರೆ ಸಾಮಾನ್ಯ ವಾಗಿ ನಗರಕ್ಕೆ. ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಹಾಗೆ ಜನರು ತಮ್ಮ ಜೀವನ ಕಟ್ಟಿಕೊಳ್ಳಲು ಪಟ್ಟಣಕ್ಕೆ ಹೋಗುವುದು ತುಂಬಾ ಅವಶ್ಯಕ ಹಾಗಾಗಿ ಬೆಳಗ್ಗೆ ಪ್ರಯಾಣ ಬೆಳೆಸಬೇಕು ಅಂತ ಬಸ್ ಸ್ಟಾಪ್ ಅಲ್ಲಿ ಬಂದು ನಿಂತು ಬಸ್ ಗಾಗಿ ಕಾಯ್ತಿರಬೇಕಾದರೆ ಕೆಲವು ಬಸ್ಸುಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ ಹಾಗೆ ಒಂದೊಂದು ಬಾರಿ ಬಸ್ ನಿಲ್ಲಿಸುವುದಿಲ್ಲ.
ಹೌದು ಇದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮುಖ್ಯ ಹೆದ್ದಾರಿಗೆ ಬರುವ ಅಫಜಲಪುರ ತಾಲೂಕಿನ ಅತಿ ದೊಡ್ಡ ಗ್ರಾಮಗಳ ಪಟ್ಟಿಯಲ್ಲಿರುವ ಗೊಬ್ಬುರ ಬಿ ಗ್ರಾಮದಲ್ಲಿ ದಿನನಿತ್ಯ ನಡೀತಿರೋ ಘಟನೆ, ಪ್ರತಿನಿತ್ಯ ಗೊಬ್ಬುರ ಬಿ ಗ್ರಾಮದಿಂದ ನೂರಾರು ಜನರು ಹಾಗೂ ವಿದ್ಯಾರ್ಥಿಗಳು ಕಲಬುರಗಿಯ ಕಡೆ ಪ್ರಯಾಣ ಬೆಳೆಸುತ್ತಾರೆ ಆದರೆ ಗೊಬ್ಬುರದಿಂದ ಕಲಬುರಗಿ ಕಡೆ ಬರೋದಕ್ಕೆ ಒಂದೇ ಮಾರ್ಗ ಇರೋದ್ರಿಂದ ದಿನನಿತ್ಯ ಬೆಳಿಗ್ಗೆ ಅಫಜಲಪುರದಿಂದ ಬರುವ ಬಸ್ಸುಗಳು ಅತನೂರ, ಚೌಡಾಪುರದಲ್ಲಿಯೇ ತುಂಬಿಕೊಂಡು ಬರುತ್ತಿರುವುದರಿಂದ ಗೊಬ್ಬುರ ಬಿ ಗ್ರಾಮದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಈ ತೊಂದರೆಗೆ ಮುಖ್ಯ ಕಾರಣವೆಂದರೆ ಅಫಜಲಪುರ ಬಸ್ ಘಟಕದ ಬೇಜವಾಬ್ದಾರಿತನ ಬಸ್ಸುಗಳ ಸಮಯ ಕಾಪಾಡದೇ ಇರುವುದು ಹಾಗೂ ಕೆಲವು ಬಸ್ಸುಗಳನ್ನು ನಾನ್ ಸ್ಟಾಪ್ ಹೆಸರಿನಲ್ಲಿ ಓಡಿಸುತ್ತಿರುವುದು ಅದರಲ್ಲಿ ಕೂಡ ವಿದ್ಯಾರ್ಥಿಗಳ ಪಾಸುಗಳನ್ನು ನಡೆಸಿಕೊಳ್ಳುತ್ತಿಲ್ಲ ಎಂಬುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಕೆಲವು ಬಸ್ಸುಗಳು ಸರಿಯಾದ ಸಮಯಕ್ಕೆ ಬಾರದೆ ಇದ್ದಾಗ ಮುಂದೆ ಬರುವ ಬಸ್ ವಿದ್ಯಾರ್ಥಿಗಳು ಮತ್ತು ಜನರಿಂದ ತುಂಬಿಕೊಂಡು ಗ್ರಾಮದ ಪ್ರಯಾಣಿಕರಿಗೆ, ಮಹಿಳೆಯರಿಗೆ & ರೋಗಿಗಳಿಗೆ ಬಸ್ಸುಗಳಲ್ಲಿ ಜಾಗವಿರುವುದಿಲ್ಲ. ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗೊಬ್ಬುರ ಬಿ ಮಾರ್ಗವಾಗಿ ಬರುವ ಬಸ್ಸುಗಳನ್ನು ಬೆಳಗಿನ ಸಮಯ ಹೆಚ್ಚುವರಿಯಾಗಿ ಹಾಗೂ ಸರಿಯಾದ ಸಮಯ ಕಾಪಾಡಿಕೊಳ್ಳಬೇಕು ನೀಡಬೇಕೆಂದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago