Latest

ರಸ್ತೆ ಪಕ್ಕದಲ್ಲಿ ಜೆ.ಸಿ.ಬಿ ಮೂಲಕ ಮಣ್ಣು ಅಗೆದು ಸಾಗಿಸಿದರು ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ!

ಮುಂಡಗೋಡ: ತಾಲೂಕಿನ ಕಾತೂರು ವಲಯ ಅರಣ್ಯಾಧಿಕಾರಿಗಳ ಸರಹದ್ದಿನಲ್ಲಿ ಬರುವ ಚಿಗಳ್ಳಿ ಗ್ರಾಮದ ಚಿಗಳ್ಳಿ ಜಲಾಶಯಕ್ಕೆ ಹೋಗುವ ರಸ್ತೆಯ ಪಕ್ಕದಲ್ಲೇ ಜೆಸಿಬಿ ಯಂತ್ರದ ಮೂಲಕ ಮಣ್ಣು ಅಗೆದು ಸಾಗಿಸಿದ್ದಾರೆ ಮತ್ತು ಚಿಗಳ್ಳಿ ಜಲಾಶಯದ ಉಬ್ಬುಗಡೆ ಪ್ರದೇಶದಲ್ಲಿ ಮೊಹರಂ (ಗೊಚ್ಚು) ಅನ್ನು ತೆಗೆದು ಸಾಗಿಸಿದ್ದಾರೆ.
ಹೌದು, ಅಂದ ಹಾಗೆ ಈ ಮಣ್ಣನ್ನು ಅಕ್ರಮವಾಗಿ ಕಳೆದ 15 ದಿನಗಳ ಹಿಂದೆಯೇ ಸಾಗಿಸಿದ್ದಾರೆನ್ನಲಾಗಿದೆ.ಈ ವಿಷಯವಾಗಿ ಕೆಲವರು ಕೇಳಿದಾಗ ಜೋಗೇಶ್ವರ ಹಳ್ಳದ ಹತ್ತಿರ ಇರುವ ಅರಣ್ಯ ಇಲಾಖೆಯ ನರ್ಸರಿಗೆ ಮಣ್ಣನ್ನು ಸಾಗಿಸಲಾಗಿದೆ ಎಂದು ಹೇಳಿದ್ದಾರೆ.ಆದರೆ ಅರಣ್ಯ ಇಲಾಖೆಯ ಈ ನರ್ಸರಿಗೆ ಮಣ್ಣು ಹೋಗಿಯೇ ಇಲ್ಲ.
ವಿಷಯ ಗೊತ್ತಿದ್ದರೂ ಸುಮ್ಮನಿದ್ದಾರಾ? ಹೌದು ,ಈ ವಿಷಯ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಗೊತ್ತಿದ್ದರೂ ಸುಮ್ಮನಿದ್ದಾರೆ ಎಂದು ಅನಿಸುತ್ತದೆ ಏಕೆಂದರೆ ರಸ್ತೆಯ ಪಕ್ಕದಲ್ಲಿ ಈ ಅಕ್ರಮ ನಡೆದರು ಇದುವರೆಗೂ ಈ ವಿಷಯದ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.
ಅಕ್ರಮ ಇಟ್ಟಿಗೆ ತಯಾರಿಕೆಗೆ ಸಾಗಾಣಿಕೆಯಾಗಿದೆಯಾ?ಅಕ್ರಮವಾಗಿ 30 ರಿಂದ 40 ಟಿಪ್ಪರ್ ಗಳಷ್ಟು ಮಣ್ಣು ಹೋಗಿರುವುದಾದರೂ ಎಲ್ಲಿಗೆ?ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಕ್ರಮವಾಗಿ ತಯಾರಾಗುವ ಇಟ್ಟಿಗೆ ತಯಾರಕರೊಂದಿಗೆ ಶಾಮಿಲಾಗಿ ಮಣ್ಣು ಸಾಗಾಣಿಕೆ ಆಗಲು ಅನುವು ಮಾಡಿಕೊಟ್ಟಿದ್ದಾರಾ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.
ಏನೇ ಆಗಲಿ ಹೀಗೆ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಮಣ್ಣು ಅಗೆದು ಸಾಗಿಸಿದವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವವರೇ ಎಂದು ಕಾಯ್ದು ನೋಡಬೇಕಾಗಿದೆ.

ವಲಯ ಅರಣ್ಯ ಅಧಿಕಾರಿಗಳು ಹೇಳೋದೇನು: ಈ ಬಗ್ಗೆ ಕಾತೂರು ವಲಯ ಅರಣ್ಯ ಅಧಿಕಾರಿಗಳನ್ನು ಕೇಳಿದಾಗ ನಮ್ಮ ಸಿಬ್ಬಂದಿಗಳನ್ನು ಕಳುಹಿಸಿ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ವರದಿ: ಮಂಜುನಾಥ ಹರಿಜನ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago