Latest

ಅನೈತಿಕ ಸಂಬಂಧ ಹೊಂದಿದ ಪತ್ನಿಯನ್ನು ಕೊಡಲಿಯಲ್ಲಿ ಹೊಡೆದು ಕೊಂದ ಪತಿ!

ರಾಯಚೂರು ತಾಲ್ಲೂಕಿನ ಏಗನೂರು ಅನ್ನೊ ಗ್ರಾಮದಲ್ಲಿ ಪತ್ನಿಯನ್ನು ಹತ್ಯೆ ಮಾಡಿದ್ದ ಪತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಆರೋಪಿ ಶಶಿಕುಮಾರ್ ಹಾಗೂ ಪಲ್ಲವಿ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ರು..ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಮೊದಲು ಇದೇ ಏಗನೂರು ಗ್ರಾಮದಲ್ಲಿ ಅಂಗನವಾಡಿಯಲ್ಲಿ ಅಡುಗೆ ಸಹಾಯಕಿಯಾಗಿ ಸ್ವಲ್ಪ ದಿನ ಕೆಲಸ ಮಾಡಿದ್ರು. ಬಳಿಕ ಆಕೆಗೆ ಇದೇ ರಾಯಚೂರು ತಾಲ್ಲೂಕಿನ ಸಂಕನೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಿಕ್ಷಕಿಯಾಗಿ ಪ್ರಮೋಷನ್ ಆಗಿತ್ತು.
ಇದಾದ ಬಳಿಕ ಆಕೆ ವ್ಯಕ್ತಿಯೊಬ್ಬನ ಜೊತೆ ಅನೈತ್ತಿಕ ಸಂಬಂಧ ಹೊಂದಿದ್ಲಂತೆ. ಫೋನ್ ನಲ್ಲಿ ಗಂಟೆಗಟ್ಟಲೇ ಮಾತನಾಡೋದು, ಎಲ್ಲೆಂದರಲ್ಲಿ ಓಡಾಡೊದು, ಅಷ್ಟೇ ಅಲ್ಲ, ಆಕೆ ಬೇರೊಬ್ಬನ ಜೊತೆ ಇರೋದನ್ನ ಖುದ್ದು ಆರೋಪಿ ಪತಿ ಶಶಿಕುಮಾರ್ ನೋಡಿದ್ದನಂತೆ. ಆದ್ರೂ ಆತ ದೃತಿಗೆಡದೇ ಪತ್ನಿಗೆ ತಿಳಿಹೇಳಿದ್ದ. ಇದಾದ ಬಳಿಕವೂ ಆಕೆ ತನ್ನ ಚಾಳಿ ಮುಂದುವರೆಸಿದ್ಲಂತೆ.
ಇದಾದ ನಂತರ ಶಶಿಕುಮಾರ್ ಕುಡಿದು ಪತ್ನಿಗೆ ಕಿರುಕುಳ ಕೊಡಲು ಶುರುಮಾಡಿದ್ದ..ಇದೇ ಕಾರಣಕ್ಕೆ ಆಕೆ ಹತ್ಯೆಯಾಗಿರೊ ಹಿಂದಿನ ದಿನ ಮಹಿಳಾ ಠಾಣೆಗೆ ಹೋಗಿದ್ದಳು. ಆಗ ಪೊಲೀಸರು ಶಶಿಕುಮಾರ್​ಗೆ ಕರೆ ಮಾಡಿ, ವಾರ್ನ್​ ಸಹ ಮಾಡಿದ್ರು.. ಆದ್ರೆ ಅದೇ ಆಕೆ ಮತ್ತೆ ಆ ವ್ಯಕ್ತಿ ಜೊತೆ ಇದ್ದದ್ದನ್ನ ಪತಿ ಶಶಿಕುಮಾರ್​ ನೋಡಿದ್ದನಂತೆ. ಅದೇ ಕೋಪಕ್ಕೆ ಮಾರನೇ ದಿನ ಪತ್ನಿ ಕೈಗೆ ಸಿಕ್ಕಾಗ ಕೊಡಲಿಯಿಂದ ಹತ್ಯೆಗೈದಿದ್ದಿನಿ ಅಂತ ಪೊಲೀಸರೆದುರು ಬಾಯ್ಬಿಟ್ಟಿದ್ದಾನೆ.
ಸದ್ಯ ರಾಯಚೂರು ಗ್ರಾಮೀಣ ಪೊಲೀಸರು ಆರೋಪಿ ಶಶಿಕುಮಾರ್​​ನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago