Latest

ಮಾಜಿ ಪ್ರೇಯಸಿಯ ದೇಹ ತುಂಡರಿಸಿ ಹತ್ಯೆಗೈದವನಿಗೆ ಗುಂಡು

ದೇಶದಲ್ಲಿ ಪ್ರೀತಿಸಿದ ಹುಡುಗಿಯ ದೇಹವನ್ನೇ ತುಂಡರಿಸುವ ಭೀಕರ ಕೃತ್ಯವು ಸಮೂಹಸನ್ನಿಯಂತಾಗಿದೆ. ದೆಹಲಿಯಲ್ಲಿ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಳ್ಕರ್‌ ದೇಹವನ್ನು ಅಫ್ತಾಬ್‌ ಅಮೀನ್‌ ಪೂನಾವಾಲಾ ಎಂಬ ದುರುಳನು 35 ಭಾಗಗಳಾಗಿ ಕತ್ತರಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲೂ ವ್ಯಕ್ತಿಯೊಬ್ಬ ಮಾಜಿ ಪ್ರೇಯಸಿಯ ದೇಹವನ್ನು ಆರು ಭಾಗಗಳಾಗಿ ತುಂಡರಿಸಿ ಹತ್ಯೆಗೈದಿದ್ದಾನೆ.
ಪೊಲೀಸರು ಈತನನ್ನು ಬಂಧಿಸಿದ್ದು, ಕೃತ್ಯದ ಸ್ಥಳಕ್ಕೆ ಕರೆದುಕೊಂಡು ಹೋದಾಗ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಜಮ್‌ಗಢ ಜಿಲ್ಲೆಯ ಪಶ್ಚಿಮಿ ಗ್ರಾಮದಲ್ಲಿ ಪ್ರಿನ್ಸ್‌ ಯಾದವ್‌ ಎಂಬಾತನು ಅನುರಾಧಾ ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ನವೆಂಬರ್‌ 9ರಂದು ಬೈಕ್‌ನಲ್ಲಿ ಅನುರಾಧಾಳನ್ನು ಕರೆದುಕೊಂಡ ಯಾದವ್‌, ಗೆಳೆಯನ ಜತೆಗೂಡಿ ಆಕೆಯನ್ನು ನಿರ್ಜನ ಪ್ರದೇಶದಲ್ಲಿ ಹತ್ಯೆಗೈದಿದ್ದಾನೆ. ಬಳಿಕ ಇಬ್ಬರೂ ಸೇರಿ ಒಂದು ಚೀಲದಲ್ಲಿ ಆಕೆಯ ದೇಹದ ಭಾಗಗಳನ್ನು ಪ್ಯಾಕ್‌ ಮಾಡಿ ಕೆರೆಗೆ ಎಸೆದಿದ್ದಾರೆ. ನವೆಂಬರ್‌ 15ರಂದು ಗ್ರಾಮಸ್ಥರಿಗೆ ಶವ ಸಿಕ್ಕಿದ್ದು, ಇದಾದ ನಂತರ ಪ್ರಕರಣ ಸುದ್ದಿಯಾಗಿದೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಿದ ಪೊಲೀಸರು ಪ್ರಿನ್ಸ್‌ ಯಾದವ್‌ನನ್ನು ಬಂಧಿಸಿ, ಕೃತ್ಯ ಎಸಗಿದ ಸ್ಥಳಕ್ಕೆ ಅವನನ್ನು ಕರೆದೊಯ್ದಿದ್ದಾರೆ. ಇದೇ ವೇಳೆ ಆತ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಸದ್ಯ, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago