Latest

ಮಳೆಗೆ ಉರುಳಿಬಿದ್ದ ಮರಗಳ ತೆರವಿಗೆ ಪಾಲಿಕೆ ಸಿಬ್ಬಂದಿಗಳೊಂದಿಗೆ ಕೈ ಜೋಡಿಸಿದ ಪೊಲೀಸರು.

ಮೈಸೂರು: ಬಿರುಗಾಳಿ ಸಮೇತ ಬಿದ್ದ ಭಾರಿ ಮಳೆಗೆ ಮೈಸೂರು ನಗರದ ಹಲವಡೆ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದೆ. ಮರದ ಕೊಂಬೆಗಳ ತೆರುವಿಗೆ ಪಾಲಿಕೆ ಸಿಬ್ಬಂದಿಗಳೊಂದಿಗೆ ಪೊಲೀಸರು ಸಹ ಮುಂದಾಗಿ ಅಚ್ಚರಿ ಮೂಡಿಸಿದ್ದಾರೆ. ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗ ಭಾರಿ ಮಳೆಗೆ ಒಟ್ಟು ಐದು ಮರಗಳ ಕೊಂಬೆಗಳು ಮುರಿದುಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಸಿಬ್ಬಂದಿಗಳ ಸಮೇತ ಆಗಮಿಸಿದ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಸಲೀಂ‌ ಅಬ್ಬಾಸ್ ಮತ್ತು ದೇವರಾಜ ಸಂಚಾರ ಠಾಣಾ ಸಿಬ್ಬಂದಿಗಳು ಪಾಲಿಕೆಯ ಅಭಯ ತಂಡದೊಂದಿಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಕೊಂಬೆಗಳ ತೆರವಿಗೆ ಮುಂದಾದರು. ಸಲೀಂ ಅಬ್ಬಾಸ್ ಮತ್ತು ಸಿಬ್ಬಂದಿಗಳ ಕಾರ್ಯಕ್ಕೆ ಸಾರ್ವಜನಿಕರು ಸಹ ಸಾಥ್ ನೀಡಿದರು. ಪೊಲೀಸರ ಸಾಮಾಜಿಕ ಕಳಕಳಿಗೆ ಸಾರ್ವಜನಿಕರ ಮೆಚ್ಚುಗೆಯೂ ವ್ಯಕ್ತವಾಯಿತು. ಪೊಲೀಸರ ಕಾರ್ಯವೈಖರಿಗೆ ಇಲಾಖಾ ಮೇಲಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago