Latest

ನಿರ್ಮಾಣವಾದ ಎಂಟೆ ತಿಂಗಳಿಗೆ ಕಿತ್ತುಹೋದ ರಸ್ತೆ!

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಕೇರಿಯಿಂದ ಕೊಂಡಗೂಳಿ ವರೆಗೆ ಇರುವ ರಸ್ತೆಯನ್ನು ಕಳೆದ ಎಂಟು ತಿಂಗಳ ಹಿಂದೆ ಹೊಸದಾಗಿ ನಿರ್ಮಾಣ ಮಾಡಲಾಗಿತ್ತು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿಯು ನಿರ್ಮಾಣವಾಗಿತ್ತು.
ಭ್ರಷ್ಟ ಅಧಿಕಾರಿಗಳು ಮಾಡಿಸಿರುವ ಕಳಪೆ ಕಾಮಗಾರಿಯಿಂದಾಗಿ ಎಂಟೆ ತಿಂಗಳಿಗೆ ರಸ್ತೆ ಹಾಳಾಗಿದೆ.
ಕೆಲವು ಗ್ರಾಮಸ್ಥರು ಇದು ಶಾಸಕರ ಬೇಜವಾಬ್ದಾರಿತನ ಎಂದು ದೂರಿದರೆ ಇನ್ನು ಕೆಲವರು ಭ್ರಷ್ಟ ಅಧಿಕಾರಿಗಳು ಕಾಮಗಾರಿ ಕಳಪೆ ಮಾಡಿಸಿ ಹಣ ಹೊಡೆದಿದ್ದಾರೆ ಎಂದು ದೂರುತ್ತಿದ್ದಾರೆ.
ಅದೇನೇ ಇರಲಿ, ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ನಿರ್ಮಾಣ ಮಾಡಿರುವಂತಹ ರಸ್ತೆ ಕೆಲವೇ ತಿಂಗಳಲ್ಲಿ ಹಾಳಾಗಿದೆ ಎಂದರೆ ಸರ್ಕಾರದ ಹಣವೇನು ಬ*** ಬಿದ್ದಿದೆಯಾ ಈ ರೀತಿ ಕಳಪೆ ಮಾಡಿಸಲು.
ಅಧಿಕಾರಿಗಳು ಸರ್ಕಾರ ನೀಡಿರುವಂತಹ ಕಾರಿನಲ್ಲಿ ನೆಮ್ಮದಿಯಾಗಿ ಓಡಾಡುತ್ತಾರೆ ಇನ್ನು ಶಾಸಕರ ಬಗ್ಗೆಯಂತೂ ಹೇಳುವ ಹಾಗೆ ಇಲ್ಲ ಹೊರಟರೆ ಹಿಂದೆ ಎರಡು ಮುಂದೆ ಎರಡು ಕಾರು ಇದ್ದೇ ಇರುತ್ತವೆ. ಆದರೆ ಜನರ ಪಾಡೇನು? ಚಿಕ್ಕ ಪುಟ್ಟ ದ್ವಿಚಕ್ರ ವಾಹನಗಳನ್ನು ಇಟ್ಟುಕೊಂಡು ಇಂತಹ ಹಾಳಾದ ರಸ್ತೆಯಲ್ಲಿ ಹೋಗುವಾಗ ಅಪಘಾತವಾದರೆ ಅದಕ್ಕೆ ಹೊಣೆ ಯಾರು? ಭ್ರಷ್ಟ ಅಧಿಕಾರಿಗಳ? ಅಥವಾ ಜನಪ್ರತಿನಿಧಿಗಳ?
ಈ ರಸ್ತೆಯಿಂದಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯುವ ಮುನ್ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ರಸ್ತೆ ಸರಿಪಡಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago