Latest

ಪತ್ನಿ ತೊರೆದು ಹೋದ ಸಿಟ್ಟಲ್ಲಿ ಅತ್ತೆಯ ಮೂಗು ಕಚ್ಚಿದ ಅಳಿಯ!

ಪತ್ನಿ ತೊರೆದು ಹೋದಳೆಂದು ಸಿಟ್ಟಿಗೆದ್ದ ಅಳಿಯನೊರ್ವ ಅತ್ತೆಯ ಮೂಗು ಕತ್ತರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ರಾಜು ಬಘೇಲ್ ಎಂಬಾತನೇ ಹೀಗೆ ಅತ್ತೆಯ ಮೂಗು ಕತ್ತರಿಸಿದ ದುರುಳ ಅಳಿಯ. ಈ ರಾಜು ಬಘೇಲ್ ಸದಾ ತನ್ನ ಹೆಂಡತಿ ಶ್ಯಾಮ್ ಸುಂದರಿಯನ್ನು ಥಳಿಸುತ್ತಿದ್ದ. ಗಂಡನ ಕಿರುಕುಳದಿಂದ ಬೇಸತ್ತ ಆಕೆ ಪೊಲೀಸರಿಗೆ ದೂರು ನೀಡಿದ್ದಳು. ಅಲ್ಲದೇ ತವರು ಮನೆ ಸೇರಿಕೊಂಡಿದ್ದಳು. ಇದರಿಂದ ಸಿಟ್ಟಿಗೆದ್ದ ರಾಜು ಬಘೇಲ್ ಈ ಕೃತ್ಯವೆಸಗಿದ್ದಾನೆ. ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊರೇನಾ ಜಿಲ್ಲೆಯ ಚಂದಾಪುರ ಗ್ರಾಮದ ನಿವಾಸಿಯಾದ 55 ವರ್ಷದ ರಾಮ್ ವಿಲಾಸಿ ತನ್ನ ಮಗಳನ್ನು ನೋಡುವ ಸಲುವಾಗಿ ತನ್ನ ಗಂಡ ರಾಮಹಿತ್ ಬಘೇಲ್ ಹಾಗೂ ಪುತ್ರನೊಂದಿಗೆ ಮಗಳ ಮನೆಗೆ ತೆರಳಿದ್ದಾರೆ. ಮಗಳನ್ನು ಕರೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ರಾಮ್ ವಿಲಾಸಿಯ ಅಳಿಯ ರಾಜು ಬಘೇಲ್ ಹಾಗೂ ಆತನ ಇಬ್ಬರು ಸಂಬಂಧಿಗಳು ಇವರನ್ನು ರಸ್ತೆ ಮಧ್ಯೆ ಅಡ್ಡ ಹಾಕಿದ್ದು, ಜಗಳ ಮಾಡಲು ಶುರು ಮಾಡಿದ್ದಾರೆ. ಇದಕ್ಕೆ ಅತ್ತೆ ರಾಮ್ ವಿಲಾಸಿ ವಿರೋಧ ವ್ಯಕ್ತಪಡಿಸಿದಾಗ ಅಳಿಯ ರಾಜು ಬಘೇಲ್ ಆಕೆಯ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. ಅಲ್ಲದೇ ಮಾವ ರಾಮ್‌ಹಿತ್ ಬಘೇಲ್ ಅವರನ್ನು ಥಳಿಸಿದ್ದಾನೆ.
ಈ ಬಗ್ಗೆ ಸ್ಥಳೀಯರು 100 ಗೆ ಕರೆ ಮಾಡಿ ಪೊಲೀಸರಿಗೆ ವಿಚಾರ ತಿಳಿಸಿದ್ದು, ನಂತರ ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳುವನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲದೇ ಹೀಗೆ ಅತ್ತೆಯನ್ನು ಕಚ್ಚಿ ಗಾಯಗೊಳಿಸಿದ ಅಳಿಯನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಠಾಣೆ ಮುಖ್ಯಸ್ಥ ಯೋಗೇಂದ್ರ ಸಿಂಗ್ ಜಾಡೌನ್ ಹೇಳಿದರು.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago