Latest

ಮಗುವನ್ನೂ ಬಿಟ್ಟು ಪ್ರಿಯತಮನ ಜತೆ ಶಿಕ್ಷಕಿ ಪರಾರಿ

ಯರಮರಸ್ ಕ್ಯಾಂಪ್ ನಿವಾಸಿ ಶಿಕ್ಷಕಿ ಸುಹಾಸಿನಿ (29) ಅ.20 ರಂದು ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೋದವಳು ನಾಪತ್ತೆಯಾಗಿದ್ದಾಳೆ. ರಾಯಚೂರಿನಲ್ಲಿ ವಿವಾಹಿತ ಶಿಕ್ಷಕಿಯೊಬ್ಬರು ೭ ವರ್ಷದ ಮಗುವನ್ನೂ ತೊರೆದು ನಾಪತ್ತೆಯಾಗಿದ್ದು, ಇದರ ಹಿಂದೆ ಲವ್ ಜಿಹಾದ್ ನಡೆದಿದೆ ಎಂದು ಶಿಕ್ಷಕಿಯ ತಾಯಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಲೀಂ ಎಂಬ ಮುಸ್ಲಿಂ ಯುವಕನ ಜೊತೆ ಈಕೆ ಹೋಗಿರುವುದಾಗಿ ಆರೋಪಿಸಲಾಗಿದೆ. ಸುಹಾಸಿನಿ ತಾಯಿ ನಿರ್ಮಲಾ ಅವರು ಈ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ತಾನು ಸುಹಾಸಿನಿಯ ಕ್ಲಾಸ್‌ಮೇಟ್ ಎಂಬ ನೆಪವೊಡ್ಡಿ ಸಲೀಂ ಪದೇ ಪದೆ ಮನೆಗೆ ಬರುತ್ತಿದ್ದ. ಯಾರೂ ಇಲ್ಲದ ವೇಳೆ ಮನೆಗೆ ಬಂದು ಸರಸವಾಡುತ್ತಿದ್ದ. ಮದುವೆ ಆಗಿ ಮಕ್ಕಳಿದ್ದರೂ ಶಿಕ್ಷಕಿ ಸುಹಾಸಿನಿ ಜೊತೆ ಸಲೀಂ ಸಂಪರ್ಕ ಹೊಂದಿದ್ದಾನೆ. ಒಂದು ತಿಂಗಳ ಹಿಂದೆ ಮನೆಯಲ್ಲಿ ವಿಚಾರ ಗೊತ್ತಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಲವ್ ಜಿಹಾದ್ ಆರೋಪ ಹೊತ್ತಿರುವ ಸಲೀಂ, ರಾಯಚೂರು ನಗರದ ಹೊರವಲಯದ ಪೊತಗಲ್ ಗ್ರಾಮದ ನಿವಾಸಿ. ಈತ ಗಂಜ್‌ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ. ಸಲೀಂಗೆ ಮದುವೆಯಾಗಿ ಒಂದು ಹೆಣ್ಣು ಮಗು ಇದೆ. ಆದರೂ ಈತ ಶಿಕ್ಷಕಿ ಸುಹಾಸಿನಿ ಹಿಂದೆ ಬಿದ್ದಿದ್ದ.
10 ವರ್ಷಗಳ ಹಿಂದೆ ಲಿಂಗರಾಜ ಎಂಬವರ ಜೊತೆ ಸುಹಾಸಿನಿಯ ಮದುವೆಯಾಗಿತ್ತು. ಈಕೆ ಯರಮರಸ್ ಬಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾಳೆ. ಸುಹಾಸಿನಿಗೆ 7 ವರ್ಷದ ಮಗುವಿದ್ದು, ಪುಟ್ಟ ಮಗುವನ್ನೂ ಬಿಟ್ಟು ಪರಾರಿಯಾಗಿದ್ದಾಳೆ.

ಸುಹಾಸಿನಿ ಮಿಸ್ಸಿಂಗ್ ಬಗ್ಗೆ ತಾಯಿ ನಿರ್ಮಲಾ ಹೇಳಿರುವ ಹೇಳಿಕೆ ಹೀಗಿದೆ: ಸಲೀಂ ನನಗೆ ಇಷ್ಟ, ಅವನನ್ನು ಮದುವೆಯಾಗುವುದಾಗಿ ಹೇಳಿದ್ದಳು. ನಿನಗೆ ಮದುವೆಯಾಗಿ ಮಗುವೂ ಇರುವಾಗ ಇದು ಬೇಡ ಎಂದೆವು. ಸಲೀಂ ಕಾಲ್ ಮಾಡಿ, ನಾವಿಬ್ಬರೂ ಮದುವೆಯಾಗುತ್ತೇವೆ ಎಂದ. ಆಕೆಗೆ ಡೈವೋರ್ಸ್ ನೀಡದೆ ಹೇಗೆ ಮದುವೆ ಆಗಲು ಸಾಧ್ಯ ಎಂದೆವು. ಅ.20ರಂದು ಮನೆಯಲ್ಲಿ ಜಗಳ ಮಾಡಿ ಮನೆಬಿಟ್ಟು ಹೋದಳು. ನಮ್ಮ ಸಂಬಂಧಿಕರಿಗೆ ಕರೆ ಮಾಡಿ ತಾವು ಮದುವೆ ಆಗಿದ್ದೇವೆಂದು ಹೇಳಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago