Latest

ಗೆಳತಿಯನ್ನು ಕೊಂದು 4 ದಿನ ಮೆಡಿಕಲ್ ಶಾಪ್‌ನಲ್ಲಿ ಇಟ್ಟಿದ್ದ ಯುವಕ!

ಮೆಡಿಕಲ್ ಸ್ಟೋರ್ನ ಮಾಲೀಕ ಆಶಿಶ್ ಸಾಹು ಹಣದ ಸಮಸ್ಯೆಯಿಂದ ತನ್ನ ಗೆಳತಿ ಪ್ರಿಯಾಂಕಾಳನ್ನು ಕೊಂದು ಶವವನ್ನು ನಾಲ್ಕು ದಿನಗಳ ಕಾಲ ತನ್ನ ಅಂಗಡಿಯಲ್ಲಿಟ್ಟು ವಿಲೇವಾರಿ ಮಾಡಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದ ಘಟನೆ ಛತ್ತೀಸ್ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತದೇಹವನ್ನು ಬಟ್ಟೆಯೊಂದರಲ್ಲಿ ಸುತ್ತಿ ಕಾರಿನಲ್ಲಿ ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಸಾಹು ಮತ್ತು ಭಿಲಾಯಿ ನಿವಾಸಿ ಪ್ರಿಯಾಂಕಾ ನಡುವೆ ಹಣಕಾಸಿನ ವಿಚಾರವಾಗಿ ಕೆಲ ಸಮಯದಿಂದ ಜಗಳ ನಡೆಯುತ್ತಿತ್ತು. ಪ್ರಿಯಾಂಕಾ ಬಿಲಾಸ್ಪುರದ ಹಾಸ್ಟೆಲ್ನಲ್ಲಿ ರಾಜ್ಯ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು.
‘ಪ್ರಿಯಾಂಕಾ ಮತ್ತು ಆಶಿಶ್ ಸಾಹು ಮಧ್ಯೆ ಆತ್ಮಿಯತೆ ಬೆಳೆಯಿತು. ನಂತರ ಇಬ್ಬರು ಒಟ್ಟಿಗೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರು. ಷೇರು ಮಾರುಕಟ್ಟೆಯಲ್ಲಿನ ನಷ್ಟದ ನಂತರ ತನ್ನಿಂದ ಸಾಲ ಪಡೆದಿದ್ದ 11 ಲಕ್ಷ ರೂಪಾಯಿಯನ್ನು ಹಿಂದಿರುಗಿಸುವಂತೆ ಆಶಿಶ್ ಗೆ ಒತ್ತಡ ಹೇರುತ್ತಿದ್ದಳು ಎಂದು ಬಿಲಾಸ್ಪುರದ ಹಿರಿಯ ಪೊಲೀಸ್ ಅಧೀಕ್ಷಕ ಪಾರುಲ್ ಮಾಥುರ್ ತಿಳಿಸಿದರು.
ಬಿಲಾಸ್ಪುರದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಿಯಾಂಕಾ ಕುಟುಂಬವು ನಾಪತ್ತೆ ದೂರು ದಾಖಲಿಸಿತ್ತು.
ನಂತರ ಪೊಲೀಸರು ಸಾಹು ಪ್ರಮುಖ ಆರೋಪಿ ಎಂದು ಶಂಕಿಸಿದ್ದು ಆತನ ಮೇಲೆ ಕಣ್ಣಿಟ್ಟಿತ್ತು. ಕುಟುಂಬದ ಸದಸ್ಯರೊಬ್ಬರು ಪ್ರಿಯಾಂಕಾ ಮತ್ತು ಸಾಹು ಇಬ್ಬರು ಪರಿಚಿತರು. ಅಲ್ಲದೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ಬಹಿರಂಗಪಡಿಸಿದರು.
ಸಾಹು ಅಂಗಡಿ ಮತ್ತು ನಿವಾಸದ ಸುತ್ತಮುತ್ತಲಿನ ಸಿಸಿಟಿವಿಯ ದೃಶ್ಯಗಳ ಜೊತೆಗೆ ಅವನ ಚಲನವಲನವನ್ನು ಸೂಕ್ಷ್ಮವಾಗಿ ಗಮನಿಸಿ ನವೆಂಬರ್ 14ರಂದು ಪ್ರಿಯಾಂಕಾಳನ್ನು ಕೊಂದ ಸಾಹು ದೇಹವನ್ನು ಮೆಡಿಕಲ್ ಶಾಪ್ ನಲ್ಲಿ ಇಟ್ಟಿದ್ದು. ಅಲ್ಲದೆ ಶವ ವಿಲೇವಾರಿಗೆ ಸಮಯ ಕಾಯುತ್ತಿದ್ದನು. ಆತ ದೇಹವನ್ನು ಸಾಗಿಸುತ್ತಿದ್ದಾಗ ಆತನನ್ನು ಬಂಧಿಸಲಾಯಿತು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಪ್ರದೀಪ್ ಆರ್ಯ ಹೇಳಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago