Latest

ಶಾಲೆಯ ಸಿಸಿ ಕ್ಯಾಮರಾ ಕಳ್ಳತನ; ಇದೂವರೆಗೂ ಪ್ರಕರಣ ದಾಖಲಿಸದ ಮುಖ್ಯಾಧ್ಯಾಪಕರು.!

ಮುಂಡಗೋಡ: ತಾಲೂಕಿನ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರಕಾರಿ ಪ್ರೌಢಶಾಲೆ ಚಿಗಳ್ಳಿಯಲ್ಲಿ ಮೂರು ಸಿಸಿ ಕ್ಯಾಮೆರಾಗಳು ಕಳ್ಳತನವಾಗಿವೆ.
ಈ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಪ್ರೇಮಿಗಳ ಸಹಾಯದಿಂದ ಕಳೆದು ಎರಡು ವರ್ಷಗಳ ಹಿಂದೆ ಆರು ಸಿ ಸಿ ಕ್ಯಾಮೆರಾ ಗಳನ್ನು ಶಾಲೆಯ ಭದ್ರತೆ ದೃಷ್ಟಿಯಿಂದ ಅಳವಡಿಸಲಾಗಿತ್ತು. ಆದರೆ ಕೆಲವು ದಿನಗಳ ಹಿಂದೆ ಗುಡುಗು ಸಹಿತ ಮಳೆಯಾಗಿದ್ದರಿಂದ ಮುನ್ನೆಚ್ಚರಿಕೆಯಾಗಿ ಸಿಸಿ ಕ್ಯಾಮೆರಾ ಗಳು ಹಾಳಾಗಬಾರದು ಎಂದು ಅವುಗಳನ್ನು ಆಫ್ ಮಾಡಲಾಗಿತ್ತಂತೆ. ಈ ಸಿಸಿ ಕ್ಯಾಮೆರಾ ಗಳು ಆಫ್ ಆದ ಬಗ್ಗೆ ತಿಳಿದುಕೊಂಡವರೇ ಈ ರೀತಿ ಮಾಡಿದ್ದಾರೆ ಎಂದು ಶಿಕ್ಷಣ ಪ್ರೇಮಿಗಳು ತಮ್ಮ ಅಸಮಾಧಾನವನ್ನು ಹೊರಗೆ ಹಾಕಿದ್ದಾರೆ.
‌ ‌ ಇನ್ನೂ ಈ ಸಿಸಿ ಕ್ಯಾಮೆರಾ ಗಳು ರವಿವಾರವೇ ಕಳ್ಳತನವಾಗಿದ್ದು ಇದುವರೆಗೂ ಶಾಲೆಯ ಮುಖ್ಯ ಶಿಕ್ಷಕರು ಪೊಲೀಸ್ ಪ್ರಕರಣ ದಾಖಲಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ.
ಈ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಿ ಇದೂವರೆಗೂ ಪ್ರಕರಣ ಯಾಕೆ ದಾಖಲಿಸಿಲ್ಲ ಮತ್ತು ತಾವು ರಜಾ ಅವಧಿಯಲ್ಲಿಯೂ ಶಾಲೆಯಲ್ಲಿ ಇರಬೇಕು ಎಂದು ಕೇಳಿದಾಗ ನಾನು ಗುರುವಾರ ಪ್ರಕರಣ ದಾಖಲಿಸುತ್ತೇನೆ ನಾನು ಶಾಲೆಗೆ ಬರುವ ಬಗ್ಗೆ ಬಿಡುವ ಬಗ್ಗೆ ನೀವು ಕೇಳಬೇಡಿ ಎನ್ನುತ್ತಾರೆ ಶಾಲೆಯ ಆಸ್ತಿಯನ್ನು ರಕ್ಷಿಸಬೇಕಾದ ಶಾಲೆಯ ಮುಖ್ಯ ಶಿಕ್ಷಕರೆ ಈ ರೀತಿಯಾಗಿ ಬೇಜವಾಬ್ದಾರಿ ಉತ್ತರ ನೀಡಿದರೆ ಹೇಗೆ.?ಈ ಬಗ್ಗೆ ಇಲಾಖೆಯ ಮೇಲಧಿಕಾರಿಗಳು ಯಾವ ರೀತಿಯ ಕ್ರಮವನ್ನು ತೆಗೆದುಕೊಳ್ಳುತ್ತಾರೆಂದು ಕಾಯ್ದು ನೋಡಬೇಕಾಗಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago