Latest

ಕ್ರೈಸ್ತ ಧರ್ಮ ಬಿಟ್ಟು ಹೋದರೆ ಮಕ್ಕಳನ್ನು ರೇಪ್‌ ಮಾಡುತ್ತೇವೆ ಎಂದು ಬೆದರಿಕೆ

ಕೊಪ್ಪಳದಲ್ಲಿ ಮತಾಂತರ ಭೂತ ವಕ್ಕರಿಸಿದೆ. ಅತ್ಯಾಚಾರ ಬೆದರಿಕೆ, ಆಮಿಷವೊಡ್ಡಿ ಬಲವಂತವಾಗಿ ಕುಟುಂಬವೊಂದನ್ನು ಮತಾಂತರ ಮಾಡಿರುವ ಆರೋಪ ಕೇಳಿ ಬಂದಿದ್ದು, ಮೂವರ ವಿರುದ್ಧ ಕಾರಟಗಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರಟಗಿ ಪಟ್ಟಣದ ರಾಮನಗರದ ನಿವಾಸಿ ಶಂಕರ್ ಎಂಬುವವರು ಇಲ್ಲಿನ ಗ್ರೇಸ್ ಪ್ರಾರ್ಥನಾ ಮಂದಿರದ ಪಾಸ್ಟರ್ ಸತ್ಯನಾರಾಯಣ ಅಲಿಯಾಸ್ ಸ್ಯಾಮುವೆಲ್, ಶಿವಮ್ಮ ಅಲಿಯಾಸ್ ಸಾರಾ ಹಾಗೂ ಚಿರಂಜೀವಿ ಅಲಿಯಾಸ್ ಡ್ಯಾನಿಯೆಲ್ ಎಂಬುವವರ ಮೇಲೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 9 ರಂದು ದೂರು ದಾಖಲಿಸಿದ್ದರು.
ಮತಾಂತರಿಗಳು ಮನೆಗೆ ನುಗ್ಗಿ ಬಲವಂತದಿಂದ ಮತಾಂತರ ಮಾಡಿದ್ದಲ್ಲದೆ, ಒಂದು ವೇಳೆ ಹಿಂದು ಧರ್ಮಕ್ಕೆ ಮರಳಿದರೆ ನಾನೇ ನಿಮ್ಮನ್ನು ಸಾಯಿಸುತ್ತೇನೆ’. ‘ನಿಮ್ಮ ಮಕ್ಕಳನ್ನು ಅಪಹರಿಸಿ ಅತ್ಯಾಚಾರ ಮಾಡಿಸುತ್ತೇನೆ’ ಎಂದು ಸತ್ಯನಾರಾಯಣ ಅಲಿಯಾಸ್ ಸ್ಯಾಮುವೆಲ್ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ಶಂಕರ್ ಕಾರಟಗಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ‌.
ದೂರು ದಾಖಲಿಸಿರುವ ಶಂಕರ್ ಹಾಗೂ ಆರೋಪ ಹೊತ್ತಿರುವ ಸ್ಯಾಮುವೆಲ್ ಸಂಬಂಧಿಕರಾಗಿದ್ದಾರೆ.
ಫೆಬ್ರವರಿ 6ರಂದು ಆರೋಪಿತರ ಮನೆಯಲ್ಲಿದ್ದ ಹಿಂದು ದೇವರ ಫೋಟೊಗಳನ್ನು ನಾಲೆಗೆ ಎಸೆದು ನಮ್ಮನ್ನು ಮತಾಂತರ ಮಾಡಿದರು. ಕ್ರಿಶ್ಚಿಯನ್ ಧರ್ಮವನ್ನು ಪಾಲಿಸದಿದ್ದರೆ ದೆವ್ವ, ಪಿಶಾಚಿಗಳಾಗಿ ಅಲೆಯುತ್ತೀರಿ. ಮತ್ತೆ ವಾಪಸ್ ಹಿಂದು ಧರ್ಮಕ್ಕೆ ಹೋಗದೆ ಕ್ರಿಶ್ಚಿಯನ್ ಧರ್ಮ ಪಾಲಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago