Latest

ಉಮಾಪತಿ ಭಾಷಣದಲ್ಲಿ ದರ್ಶನ್ ವಿರುದ್ಧ ಮತ್ತೊಮ್ಮೆ ಕಿಡಿಕಾರಿಕೆ..

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲಿನಲ್ಲಿ ಇದ್ದ ಹಿನ್ನೆಲೆಯಲ್ಲಿ, ಈಗ ಅವರ ಹೆಸರು ಮರುಮತ್ತೆ ಸುದ್ದಿಗೆ ಎಳೆದಿದೆ. ಈ ಬಾರಿ ಕಾರಣ, ನಿರ್ಮಾಪಕ ಉಮಾಪತಿ ಅವರ ಮಾತುಗಳು.

‘ರಾಬರ್ಟ್’ ಸಿನಿಮಾದ ಟೈಟಲ್ ವಿವಾದದಿಂದ ಶುರುವಾದ ದರ್ಶನ್ ಮತ್ತು ಉಮಾಪತಿ ನಡುವಿನ ದ್ವೇಷ, ತಗಡು ಎಂಬ ಪದ ಬಳಕೆಯಿಂದ ಮತ್ತಷ್ಟು ಉಲ್ಬಣಗೊಂಡಿತ್ತು. ಈಗ ಉಮಾಪತಿ ಅವರು ನೀಡಿರುವ ಹೊಸ ಹೇಳಿಕೆ, ಈ ಬಾಂಬನ್ನು ಮತ್ತೊಮ್ಮೆ ಸಿಡಿಸಿರುವಂತಾಗಿದೆ.

ಸಿದ್ದಾಪುರ ತಾಲೂಕಿನ ಹಲಗಡಿಕೊಪ್ಪ ಗ್ರಾಮದಲ್ಲಿ ನಡೆದ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉಮಾಪತಿ ಮಾತನಾಡುತ್ತಾ, “ಈ ಜಗತ್ತಿನಲ್ಲಿ ಎರಡು ರೀತಿಯ ಜನರು ಇರುತ್ತಾರೆ. ಕೆಲವರು ಇತರರಿಗೆ ಮಾದರಿಯಾಗಿ ಬದುಕುತ್ತಾರೆ, ಕೆಲವರು ಎಚ್ಚರಿಕೆ ಕೊಡುವ ರೀತಿಯಲ್ಲಿ ಬದುಕುತ್ತಾರೆ. ಜೈಲಿಗೆ ಹೋಗಿ ಬಂದವರು ಎಚ್ಚರಿಕೆಯ ಪ್ರತೀಕವಾಗುತ್ತಾರೆ ಅಥವಾ ತೊಂದರೆ ನೀಡುವ ಮೂಲಕ ನಾಶವಾಗುತ್ತಾರೆ” ಎಂಬ ಹೇಳಿಕೆಯಿಂದ ಡಿಬಾಸ್‌ನ್ನು ಉಲ್ಲೇಖಿಸಿರುವಂತೆ ಜನರು ಅರ್ಥೈಸಿದ್ದಾರೆ.

ಮತ್ತೊಂದು ಮಹತ್ವದ ಮಾತಿನಲ್ಲಿ ಅವರು, “ದೊಡ್ಡವರನ್ನೆಲ್ಲಾ ಯಾಕೆ ಎದುರು ಹಾಕಿಕೊಳ್ಳುತ್ತಾ ಇರುತ್ತೀಯಾ ಅಂತ ಕೆಲವರು ಕೇಳ್ತಾರೆ. ಆದರೆ ನಿಜ ಹೇಳ್ಬೇಕಂದ್ರೆ, ನಾನು ಯಾರನ್ನೂ ಎದುರು ಹಾಕಿಕೊಳ್ಳಲ್ಲ… ಅವರು ನನ್ನನ್ನು ಎದುರು ಹಾಕಿಕೊಳ್ಳುತ್ತಾರೆ. ನಾನು ಯಾರಿಗಾದರೂ ಭಯಪಡೋಂಥವನು ಅಲ್ಲ” ಎಂದು ಹೇಳಿದ್ದಾರೆ.

ಇದೇ ಭಾಷಣದ ಹಿನ್ನಲೆಯಲ್ಲಿ, ಉಮಾಪತಿ ಮತ್ತೆ ದರ್ಶನ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ ಎಂಬ ಅಭಿಪ್ರಾಯಗಳು ಎದ್ದಿವೆ. ಈಗ ಈ ಮಾತುಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಅಥವಾ ಸಿನಿಮಾ ಲೋಕದ ಬೆಳವಣಿಗೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬ ಕುತೂಹಲ ಮೂಡಿದೆ.

nazeer ahamad

Recent Posts

ಬಿಸಿಎ ವಿದ್ಯಾರ್ಥಿನಿ ಆತ್ಮಹತ್ಯೆ: ಹಾಸ್ಟೆಲ್ ಕೊಠಡಿಯಲ್ಲಿ ದುರ್ಘಟನೆ

ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ…

14 hours ago

ಭೋಪಾಲ್‌ ಆಸ್ಪತ್ರೆಯಲ್ಲಿ ಅದ್ಭುತ ಘಟನೆ: ಮಹಿಳೆಯಿಂದ ಏಕಕಾಲದಲ್ಲಿ ನಾಲ್ಕು ಶಿಶುಗಳಿಗೆ ಜನ್ಮ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಕೈಲಾಶ್‌ನಾಥ್ ಕಟ್ಜು ಆಸ್ಪತ್ರೆಯಲ್ಲಿ ಅಪರೂಪದ ಘಟನೆೊಂದು ನಡೆದಿದೆ. ಅಲ್ಲಿನ ಮಹಿಳೆಯೊಬ್ಬರು ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ…

14 hours ago

ಪತ್ನಿಯ ದೂರು ಭೀತಿಯಿಂದ ಪೊಲೀಸ್ ಠಾಣೆ ಎದುರು ಪತಿಯ ಆತ್ಮಹತ್ಯೆ ಯತ್ನ

ಮಧ್ಯಪ್ರದೇಶದ:  ಭೋಪಾಲ್‌ನ ಗೌತಮ್ ನಗರ ಪೊಲೀಸ್ ಠಾಣೆಯ ಬಳಿ ಶುಕ್ರವಾರ ಭಯಾನಕ ಘಟನೆ ನಡೆದಿದೆ. ತನ್ನ ಪತ್ನಿ ಪೊಲೀಸರಿಗೆ ದೂರು…

15 hours ago

ಗಾಂಧಿ ವೃತ್ತದ ಮೆಡಿಕಲ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ. ನಷ್ಟ

ಪಟ್ಟಣದ ಗಾಂಧಿ ವೃತ್ತದಲ್ಲಿರುವ ಮೆಡಿಕಲ್ ಅಂಗಡಿಯಲ್ಲಿ ಶುಕ್ರವಾರ (ಏಪ್ರಿಲ್ 12) ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕಿಟ್‌ನಿಂದ ಭಾರಿ ಅಗ್ನಿ ಅವಘಡ…

15 hours ago

ಬಿಹಾರದಿಂದ ಗಾಂಜಾ ಕಳ್ಳವ್ಯವಹಾರ: ₹3 ಲಕ್ಷ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡ ಪೊಲೀಸರು

ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಬಿಹಾರದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.…

16 hours ago

ಒಂದುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ : ಪ್ರೇಯಸಿಯ ನಿರಾಕರಣೆಗೆ ಕ್ರೂರ ಪ್ರತೀಕಾರ”

ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ಜನಮಾನಸವನ್ನು ನಡುಗಿಸುವಂತೆ ಭಯಾನಕ ಘಟನೆ ನಡೆದಿದೆ. ತನ್ನ ಪ್ರೇಯಸಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸಿದ ಆಕ್ರೋಶದಿಂದ ಒಡಿಶಾದ…

18 hours ago