Latest

ವಿಜೃಂಭಣೆಯಿಂದ ಜರುಗಿದ ವೀರಯೋಗೆಂದ್ರ ಸ್ವಾಮಿಗಳ ತೆಪ್ಪದ ರಥೋತ್ಸವ ಮತ್ತು ಕಾರ್ತಿಕೋತ್ಸವ..!

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಗುರು ವೀರಯೋಗೆಂದ್ರ ಮಹಾಸ್ವಾಮಿಯ ದೇವಸ್ಥಾನದ ನೀರಿನ ಹೊಂಡದಲ್ಲಿ ಪ್ರತಿ ವರ್ಷದಂತೆ ತೆಪ್ಪದ ತೇರು ಉತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಪ್ರತಿ ವರ್ಷ ಛಟ್ಟಿ ಅಮವಾಸ್ಯೆಯಂದು ತೆಪ್ಪದ ರಥೋತ್ಸವ ನಡೆಯುತ್ತದೆ.ಸೂರ್ಯ ಪಶ್ಚಿಮಾಭಿಮುಖವಾಗಿ ಇಳಿಯುತ್ತಿದ್ದಂತೆ, ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ತೆಪ್ಪದ ರಥವು ಹೊಂಡದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಂತೆ ಹೊಂಡದ ಸುತ್ತಲೂ ನಿಂತಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು,ಉತ್ತತ್ತಿ ಎಸೆದು ಭಕ್ತಿಯ ಪರಾಕಾಷ್ಠೆಯನ್ನು ಮೆರೆದರು.

ಗುರು ವೀರಯೋಗೇಂದ್ರ ಅವರು ಮಹಾನ್ ತ್ಯಾಗಿ, ಹಠಯೋಗಿಯಾಗಿದ್ದು, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಮನದ ಆರಾಧ್ಯ ದೈವವಾಗಿದ್ದಾರೆ. ಛಟ್ಟಿ ಅಮವಾಸ್ಯೆಯಂದು ದೇವಸ್ಥಾನ ಪಕ್ಕದ ಕಲ್ಯಾಣಿಯಲ್ಲಿ ತೆಪ್ಪದ ರಥೋತ್ಸವ ನಡೆಯುತ್ತದೆ. ರಥೋತ್ಸವದ ನಂತರ ದೀಪೋತ್ಸವ ಕಾರ್ಯಕ್ರಮವು ಸಹ ನಡೆಯುತ್ತದೆ ಎಂದು ಗ್ರಾಮದ ಶಿಕ್ಷಕರಾದ ಶ್ರೀ ಬಸವರಾಜ ಬೆಂಡ್ಲಗಟ್ಟಿ ಹೇಳಿದರು. ಚಿಗಳ್ಳಿ, ಕಾವಲಕೊಪ್ಪ ಮುಡಸಾಲಿ,ಅಜ್ಜಳ್ಳಿ ಸೇರಿದಂತೆ ಅಕ್ಕ ಪಕ್ಕದ ಗ್ರಾಮದ ಜನರು ಭಾಗವಹಿಸಿದ್ದರು.
ಶ್ರೀ ಸ.ಸ. ಕಲ್ಲೇಶ್ವರ ಮಹಾರಾಜರ ಆಶ್ರಮದಲ್ಲಿ ಶ್ರೀ ಶ್ರೀ ಷ.ಬ್ರ. ಶ್ರೀ ಗುರುನಂಜೇಶ್ವರ ಶಿವಾಚಾರ್ಯರು, ಗುರುನಂಜೇಶ್ವರ ಮಠ, ಕೂಡಲ ಇವರಿಂದ ದೀಪೋತ್ಸವ ಕಾರ್ಯಕ್ರಮ ಚಾಲನೆಗೊಂಡು ಶ್ರೀ ದೀಪನಾಥೇಶ್ವರ, ಈಶ್ವರ ದೇವಸ್ಥಾನ, ಶ್ರೀ ಫಕ್ಕೀರೇಶ್ವರ ದೇವಸ್ಥಾನ ಹಾಗೂ ಶ್ರೀ ವಿರಯೋಗೇಂದ್ರಸ್ವಾಮಿಗಳ ದೇವಸ್ಥಾನ ಚೌಕಿಮಠದ ವರೆಗೆ ದೀಪೋತ್ಸವವು ಜರುಗಿ ನಂತರ ಶ್ರೀ ವೀರಯೋಗೇಂದ್ರ ಸ್ವಾಮಿಯ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ಜರಗಿತು.
ವರದಿ:ಮಂಜುನಾಥ ಹರಿಜನ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago