Latest

ಮಳೆಗಾಗಿ ಕಪ್ಪೆ ಗಳಿಗೆ ಮದುವೆ ಮಾಡಿಸಿದ ಗ್ರಾಮಸ್ಥರು.

ಕುಂದಗೋಳ; ತಾಲೂಕಿನ ಎಲ್ಲೆಡೆ ಮುಂಗಾರು ಪೂರ್ವ ಮಳೆ ಕೈಕೊಟ್ಟಿದೆ. ಇದೀಗ ಮುಂಗಾರು ಕೂಡ ವಿಳಂಬವಾದ ಹಿನ್ನೆಲೆಯಲ್ಲಿ ಅನ್ನದಾತರು ಆತಂಕಕ್ಕೆ ಒಳಗಾಗಿದ್ದಾರೆ, ಇನ್ನೂ ಕೆಲವಡೆ ರೈತರು ಮಳೆಗಾಗಿ ವಿಶೇಷ ಪೊಜೆಗಳನ್ನು ಮಾಡುತ್ತಲ್ಲೆ ಇದ್ದಾರೆ. ಹಾಗೇ ಕುಂದಗೋಳ ಪಟ್ಟಣದ ಕಾಳಿದಾಸ ನಗರದ ನಿವಾಸಿಗಳು ಕಪ್ಪೆಗಳಿಗೆ ಮದುವೆ ಮಾಡಿದ ಘಟನೆಯೂ ನಡೆದಿದೆ.

ಹೌದು..! ಜೂನ ತಿಂಗಳು ಬಂದರೆ ಸಾಕು ರೈತರು ಮಳೆ ಬರುತ್ತೆದೆ ಎನ್ನುವ ನಿರೀಕ್ಷೆಯಲ್ಲಿ ಇರುತ್ತಾರೆ. ಆದರೆ ಇದೀಗ ಹದಿನೈದು ದಿನಗಳು ಕಳೆದರೂ ಮಳೆ ಮಾತ್ರ ಇನ್ನು ಪ್ರವೇಶ ಮಾಡಿಲ್ಲಿ. ಆದ್ದರಿಂದ ಕೆಲವೆಡೆ ರೈತರು ದೇವರು ಮೊರೆ ಹೋಗಿ ವಿಶೇಷ ಪೊಜಿಗಳು ಸಲ್ಲಿಸುತ್ತಿದ್ದಾರೆ. ಅದೇ ರೀತಿ ಕುಂದಗೋಳ ಪಟ್ಟಣದ ಕಾಳಿದಾಸ ನಗರದ ನಿವಾಸಿಗಳು ಮಳೆ ಬರಲಿ ಅಂತ ಕಪ್ಪೆಗಳಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿದ್ದು, ಇಲ್ಲಿ ವಿಶೇಷವಾಗಿತ್ತು.

ಮಳೆ ಆಗಿಲ್ಲ ಅಂದರೆ ಆಗಿನ ಪೂರ್ವಜರು ಕಪ್ಪೆಗಳಿಗೆ ಮದುವೆ ಮಾಡುತ್ತಿದ್ದರು, ಇಂದು ಕೂಡ ಅದೇ ಕಾರ್ಯ ಮುಂದುವರಿತ್ತೂ ಬಂದಿದೆ ಅದರಂತೆ ಕುಂದಗೋಳ ಪಟ್ಟಣದ ಕಾಳಿದಾಸ ನಗರದಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಯಿತ್ತು. ಮನುಷ್ಯರ ಮದುವೆ ಹೇಗೆ ನಡೆಯಿತ್ತು ಹಾಗೆ ಮುತ್ತೈದೆಯ ರಿಗೆ ಉಡಿ ತುಂಬುವುದು, ಮನುಷ್ಯರ ಕೈಗಳಿಗೆ ಕಂಕಣ ಕಟುತ್ತಾರೂ ಹಾಗೇ ಕಪ್ಪೆಗಳಿಗೆ ಕಂಕಣ ಕಟ್ಟಿ, ಕೆರೆ ನಿರ್ಮಿಸಿ, ಕಡಪಟ್ಟ ರಸ್ತೆಯಲ್ಲಿರುವ ಯಲ್ಲಮ್ಮ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ. ಮಳೆಗಾಗಿ ಪ್ರಾಥಿಸಿದರು.

ಒಟ್ಟಾರೆಯಾಗಿ ಹೇಳುವುದಾದರೆ ರೈತಾಪಿ ವರ್ಗದ ಈ ಪ್ರಾರ್ಥನೆಯಿಂದ ವರುಣ ದೇವ ನಾಡಿನ ತುಂಬೆಲ್ಲಾ ಕೃಪೆ ತೋರೆಲಿ ಅನ್ನುವುದು ರೈತಾರ ಆಶಯ.

ವರದಿ; ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago