ಬೆಂಗಳೂರು: ಪ್ರತಿಷ್ಠಿತ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ಅವರನ್ನು ಹೆಚ್ಎಸ್ಆರ್ ಲೇಔಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.
ಹೋಟೆಲ್ ಎದುರು ಗಲಾಟೆ – ಪುನಾವೃತವಾದ ಘಟನೆ
ಫೆಬ್ರವರಿ 7ರಂದು, ಬೆಂಗಳೂರಿನ ಒಂದು ಹೋಟೆಲ್ ಬಳಿ ವಿಷ್ಣು ಭಟ್ ಗಲಾಟೆ ಮಾಡಿದ್ದರೆಂದು ಮಾಹಿತಿ ದೊರಕಿದೆ. ಈ ಘಟನೆ ಮರೆತು ಹೋಗುವಷ್ಟರಲ್ಲಿಯೇ, ಫೆಬ್ರವರಿ 26ರಂದು ಅವರು ಮತ್ತೆ ಅದೇ ಹೋಟೆಲ್ ಗೆ ತೆರಳಿ, ವಿನಾಕಾರಣ ಜಗಳ ಆರಂಭಿಸಿದರು. ಈ ವೇಳೆ ಕಬ್ಬಿಣದ ವಸ್ತುವಿನಿಂದ ಹೋಟೆಲ್ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾನೂನು ಕ್ರಮ
ಹಲ್ಲೆಗೊಳಗಾದ ಹೋಟೆಲ್ ಸಿಬ್ಬಂದಿ, ತಕ್ಷಣವೇ ಹೆಚ್ಎಸ್ಆರ್ ಲೇಔಟ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಷ್ಣು ಭಟ್ ಅವರನ್ನು ಬಂಧಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಕೊಪ್ಪಳದ ಗಂಗಾವತಿ ಬಳಿ ನಡೆದ ವಿದೇಶಿ ಮಹಿಳೆ ಹಾಗೂ ಹೋಮ್ಸ್ಟೇ ಮಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ…
ಅರಸೀಕೆರೆ ರೈಲ್ವೆ ಪೊಲೀಸರು ತೀವ್ರ ತನಿಖೆ ನಡೆಸಿ, ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಹತ್ಯೆ…
ಖಾಸಗಿ ಆಸ್ಪತ್ರೆಯ ದುಬಾರಿ ಬಿಲ್ ನೋಡಿ, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಮ್ಲಜನಕ ಮಾಸ್ಕ್ ಸಮೇತ ಆಸ್ಪತ್ರೆಯಿಂದ ಹೊರಗೆ ಬಂದು…
ಬೆಂಗಳೂರು ನೆಲಗದರನಹಳ್ಳಿಯಲ್ಲಿ ಪತಿ ಪತ್ನಿಯ ಸೌಂದರ್ಯ ಕುರಿತು ಟೀಕಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪತಿ ಪುಲಿ…
ಹ್ಯೂಸ್ಟನ್ನಿಂದ ಫೀನಿಕ್ಸ್ಗೆ ತೆರಳುತ್ತಿದ್ದ ಸೌತ್ ವೆಸ್ಟ್ ಏರ್ಲೈನ್ಸ್ ಫ್ಲೈಟ್ 733ನಲ್ಲಿ ನಡೆದ ಅಹಿತಕರ ಘಟನೆಯಿಂದ ಪ್ರಯಾಣಿಕರು ತೀವ್ರ ಆತಂಕ ಅನುಭವಿಸಿದರು.…
ಗುರುವಾರ (ಮಾರ್ಚ್ 7) ರಾತ್ರಿ 11 ರಿಂದ 11:30ರ ನಡುವೆಯೇ ಭಯಾನಕ ಘಟನೆ ನಡೆದಿದೆ. 27 ವರ್ಷದ ಇಸ್ರೇಲಿ ಯುವತಿ…