Latest

ಜೊತೆಗೆ ಮಲಗಲು ಗಂಡನಿಗೆ 5 ಸಾವಿರ ರೇಟ್ ಫಿಕ್ಸ್ ಮಾಡಿದ ಪತ್ನಿ; ಟೆಕ್ಕಿಯ ಕಣ್ಣೀರಿನ ಕಥೆ

ಬೆಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಎಫ್‌ಐಆರ್ ಪ್ರಕಾರ, ಹೆಂಡತಿಯ ಕಿರುಕುಳದಿಂದ ಬಳಲಿದ ಟೆಕ್ಕಿಯೊಬ್ಬರು ಪತ್ನಿ ಮತ್ತು ಆಕೆಯ ಮನೆಯವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟೆಕ್ಕಿಯ ಗಂಭೀರ ಆರೋಪಗಳು

2022ರ ಆಗಸ್ಟ್‌ನಲ್ಲಿ ಮದುವೆಯಾಗಿದ್ದ ಈ ಟೆಕ್ಕಿ, ಎರಡು ವರ್ಷಗಳಾದರೂ ಸರಿಯಾದ ದಾಂಪತ್ಯ ಜೀವನ ನಡೆಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಪತ್ನಿ ನಿರಂತರವಾಗಿ ಹಣದ ಬೇಡಿಕೆ ಇಟ್ಟಿದ್ದು, ದಿನನಿತ್ಯವೂ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾಳೆ ಎನ್ನುವುದು ಅವರ ದೂರು.

“ಬಲವಂತವಾಗಿ ಮುಟ್ಟಿದರೆ ಡೆತ್‌ನೋಟ್ ಬರೆದಿಟ್ಟು ಸಾಯುತ್ತೇನೆ ಎಂದು ಪತ್ನಿ ಬ್ಲಾಕ್ ಮೇಲ್ ಮಾಡುತ್ತಾಳೆ. ಜೊತೆ ಮಲಗಲು 5000 ರೂ. ಕೊಡಬೇಕು ಎಂದು ಕೇಳುತ್ತಾಳೆ. ಫೈನಾನ್ಷಿಯಲ್ ಶೋಷಣೆಯ ಜೊತೆಗೆ ದೈಹಿಕ ಹಲ್ಲೆಗೂ ಒಳಗಾದಿದ್ದೇನೆ. ಪತ್ನಿ ನನ್ನ ಮರ್ಮಾಂಗಕ್ಕೆ ಹೊಡೆದು ಕೊಲ್ಲಲು ಪ್ರಯತ್ನಿಸಿದ ಘಟನೆ ಸಹ ನಡೆದಿದೆ,” ಎಂದು ಅವರು ಆರೋಪಿಸಿದ್ದಾರೆ.

ಹಣಕ್ಕಾಗಿ ಪತ್ನಿ ಮತ್ತು ಮನೆಯವರ ಹಿಂಸೆ?

ದೂರು ಪ್ರಕಾರ, ಪತ್ನಿಯ ಮನೆಯವರು ಮನೆ ಕೊಂಡುಕೊಳ್ಳಲು ಲಕ್ಷಾಂತರ ರೂಪಾಯಿ ಬೇಡಿಕೆಯಿಟ್ಟಿದ್ದರು. ಟೆಕ್ಕಿಯು ಹಣ ನೀಡಲು ನಿರಾಕರಿಸಿದ ನಂತರ, ಪತ್ನಿಯ ಕಿರುಕುಳ ಹೆಚ್ಚಾಗಿದೆ.

“ನೀನು ಬದಲಾಯಿಸದ ಹಾದರೇ ನನ್ನ ಬಳಿ ಬರಲ್ಲ. 60 ವರ್ಷ ಆದ್ಮೇಲೆ ಮಾತ್ರ ಮಕ್ಕಳ ಬಗ್ಗೆ ಚಿಂತಿಸೋಣ,” ಎಂದು ಪತ್ನಿ ಹೇಳಿದರೆಂದು ಅವರು ದೂರಿದ್ದಾರೆ.

ಉದ್ಯೋಗ ಕಳೆದುಕೊಂಡ ಟೆಕ್ಕಿ

ಈ ದುಃಖಾಂತ್ಯದ ಪರಿಣಾಮವಾಗಿ, ಟೆಕ್ಕಿಯು ಖಾಸಗಿ ಕಂಪನಿಯೊಂದರಲ್ಲಿ ತನ್ನ ಸಾಫ್ಟ್‌ವೇರ್ ಉದ್ಯೋಗ ಕಳೆದುಕೊಂಡಿದ್ದಾರೆ. “ವರ್ಕ್ ಫ್ರಮ್ ಹೋಮ್ ವೇಳೆ ಪತ್ನಿ ನಿರಂತರವಾಗಿ ಜಗಳ ಮಾಡಿ, ಡ್ಯಾನ್ಸ್ ಮಾಡುತ್ತಾ ತೊಂದರೆ ಕೊಡುತ್ತಿದ್ದಳು. ಅದರಿಂದ ನನ್ನ ಉದ್ಯೋಗವೇ ಕೈ ತಪ್ಪಿತು. ವಿಚ್ಛೇದನ ಕೇಳಿದರೆ 45 ಲಕ್ಷ ರೂ. ನೀಡಬೇಕೆಂದು ಪತ್ನಿ ಬೇಡಿಕೆ ಇಟ್ಟಿದ್ದಾರೆ,” ಎಂದು ಅವರು ದೂರಿದ್ದಾರೆ.

ಪತ್ನಿಯ ಪ್ರತಿಕ್ರಿಯೆ

ಈ ಸಂಬಂಧ ಪೊಲೀಸರು ಪತ್ನಿಯ ಹೇಳಿಕೆ ಪಡೆದುಕೊಂಡಿದ್ದು, “ನಾನು ಆತನ ಜೊತೆ ಬಾಳಲು ಇಚ್ಛಿಸುತ್ತಿಲ್ಲ. ನಮಗೆ ಒಪ್ಪಂದ ಆಗದು,” ಎಂದು ಪ್ರತಿಕ್ರಿಯಿಸಿದ್ದಾಳೆ.

ಈ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಟೆಕ್ಕಿಗಳ ಮೇಲೆ ವರದಕ್ಷಿಣೆ ಕೇಸ್‌ಗಳು ಮತ್ತು ಮಾನಸಿಕ ಹಿಂಸೆ ಆರೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಘಟನೆಗೆ ನ್ಯಾಯ ಸಿಗಬಹುದಾ ಎಂಬ ಪ್ರಶ್ನೆ ಮೂಡಿದೆ.

ಭ್ರಷ್ಟರ ಬೇಟೆ

Recent Posts

ಉದಯಗಿರಿ ಗಲಭೆ: ಕರ್ತವ್ಯ ಲೋಪದ ಆರೋಪಕ್ಕೆ ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

ಮೈಸೂರು: ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.…

4 minutes ago

₹40,000 ಲಂಚ ಸ್ವೀಕರಿಸುವಾಗ ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರು ಚಾಲಕ ಲೋಕಾಯುಕ್ತ ಬಲೆಗೆ!

ಚನ್ನಗಿರಿ: ಅಮಾನತುಗೊಂಡ ಗ್ರಂಥಾಲಯ ಮೇಲ್ವಿಚಾರಕರನ್ನು ಪುನರ್‌ನೇಮಕ ಮಾಡಿಸಲು ₹40,000 ಲಂಚ ಪಡೆಯುತ್ತಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ. ಉತ್ತಮ್…

34 minutes ago

ಅತ್ಯಾಚಾರಕ್ಕೆ ಮುಂದಾದ ತಂದೆ: ಮರ್ಮಾಂಗ ಕಟ್ ಮಾಡಿದ ಪುತ್ರಿ!

ಮಹಾರಾಷ್ಟ್ರದ ನಲಸೋಪಾರ ಪೂರ್ವದ ಚಾಲ್‌ನಲ್ಲಿ ನಡೆದ ತೀವ್ರ ಆಘಾತಕಾರಿ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಎರಡು ವರ್ಷಗಳಿಂದ ನಿರಂತರ ಲೈಂಗಿಕ…

2 hours ago

ಪತ್ನಿಗೆ ವರದಕ್ಷಿಣೆ ಕಿರುಕುಳ,: ಸಬ್‌ ಇನ್ಸ್‌ಪೆಕ್ಟರ್‌ ವಿರುದ್ಧ FIR

ಧರ್ಮಸ್ಥಳ ಸಬ್‌ ಇನ್ಸ್‌ಪೆಕ್ಟರ್‌ ಕಿಶೋರ್‌ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ತಮ್ಮ ವರ್ಗಾವಣೆಗೆ…

3 hours ago

“ಗುಬ್ಬಿಯಲ್ಲಿ 15 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಅಂತರ್-ರಾಜ್ಯ ಕಳ್ಳರ ಬಂಧನ, 16 ಲಕ್ಷ ಮೌಲ್ಯದ ಸ್ವತ್ತು ವಶ”

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ 15 ಲಕ್ಷ ನಗದು ಕಳ್ಳತನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಪೊಲೀಸ್ ಠಾಣೆ ಪೊಲೀಸರು ಇಬ್ಬರು…

3 hours ago

ಲಾಭಕ್ಕಿಂತ ಹೊರೆಯೇ ಹೆಚ್ಚು, ಸ್ಮಾರ್ಟ್ ಮೀಟರ್ ವಿರುದ್ಧ ಬೆಂಗಳೂರಿನ ಜನರ ಆಕ್ರೋಶ

ಬೆಂಗಳೂರು ನಗರದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಾಗಿರುವುದರಿಂದ ಜನರು ತೊಂದರೆಗೆ…

4 hours ago