Latest

ಖಾಸಗಿ ಬ್ಯಾಂಕ್ ಸಿಬ್ಬಂದಿ ಕಿರುಕುಳಕ್ಕೆ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ!

ಬೆಳಗಾವಿ ಜಿಲ್ಲೆಯ ಬೈರನಟ್ಟಿ ಗ್ರಾಮದಲ್ಲಿ ಬ್ಯಾಂಕ್ ಸಿಬ್ಬಂದಿಗಳ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.  ಪಾರ್ವತೆಮ್ಮ ಸೋಮಪ್ಪ ಮುತ್ನಾಳ ಎಂಬ 50 ವರ್ಷದ ಮಹಿಳೆ ಮಗನಾದ ದೇಮಪ್ಪ ಖಾಸಗಿ ಬ್ಯಾಂಕ್ ಮುಚ್ಚಂಡಿಯಿಂದ ಎಮ್ಮೆಯ ಮೇಲೆ ಸಾಲವನ್ನು ತೆಗೆದುಕೊಂಡಿದು. ಇಲ್ಲಿಯವರೆಗೂ ಕಂತುಗಳನ್ನು ಕಟ್ಟುತ್ತಾ ಬಂದಿದ. ಈ ತಿಂಗಳು ಅಂದರೆ ಫೆಬ್ರುವರಿ ತಿಂಗಳ ಕಂತು ಕಟ್ಟುವುದು ತಡವಾದರಿಂದ ದಿನಾಂಕ 15/02/2024 ರ ಬೆಳಿಗ್ಗೆ 10 ಘಂಟೆ ಸುಮಾರಿಗೆ ಖಾಸಗಿ ಬ್ಯಾಂಕ್ ಸಿಬ್ಬಂದಿಯಾದ ಸೋಮು ಕಿರಗಾವ ಹಾಗೂ ಹೆಸರು ಗೊತ್ತಿರದ ಇನ್ನೊಬ್ಬ ಸಿಬ್ಬಂದಿ, ಇಬ್ಬರು ಪದೇ ಪದೇ ಮನೆಗೆ ಬಂದು ಒಬ್ಬಳೇ ಇದ್ದಾಗ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ಮಹಿಳೆ ಆರೋಪಿಸಿರುತ್ತಾರೆ.
ಮರ್ಯಾದೆಗೆ ಹೆದರಿ, ಬೈಯಬೇಡಿ ನಾನು ಏನಾದರೂ ಕುಡಿದು ಸಾಯ್ತೀನಿ ನೋಡಿ  ಎಂದಾಗ ಬ್ಯಾಂಕಿನ ಸಿಬ್ಬಂದಿ ನೀನು ವಿಷ ಕುಡಿದು ಸಾಯಿ ಆಗ ನಿನ್ನ ಮಗ ಬರುತ್ತಾನಲ್ಲ ಅವ ಬಂದ ಮೇಲೆ ಸಾಲ ವಸೂಲಿ ಮಾಡುತ್ತೇವೆ ಎಂದು ವಿಷ ಕುಡಿಯಲು ಬ್ಯಾಂಕ್ನ ಸಿಬ್ಬಂದಿಯೇ ಪ್ರಚೋದಿಸಿರುತ್ತಾನೆ ಎಂದು ಮಹಿಳೆ ಆರೋಪಿಸಿರುತ್ತಾರೆ.
ಮಹಿಳೆಯು ವಿಷ ಸೇವಿಸಿದ್ದು ಸ್ಥಳದಿಂದ ಬ್ಯಾಂಕ್ ನ ಸಿಬ್ಬಂದಿಗಳು ಪರಾರಿಯಾಗಿರುತ್ತಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು ನೇಸರಗಿ ಠಾಣ ಪೊಲೀಸರು ದೂರನ್ನು ದಾಖಲಿಸಿಕೊಂಡಿರುತ್ತಾರೆ.

ವರದಿ: ಸಂಗಪ್ಪ ಚಲವಾದಿ

 

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago