Latest

ಯಾದಗಿರಿ: ಚಿಂದಿ ಆಯುವ ಯುವತಿಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಬೆಂಗಳೂರಿನಲ್ಲಿ ಪ್ರತಿಭಟನೆ…!

ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕು ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿಂದಿ ಆಯುವ ಯುವತಿಯರಿಬ್ಬರ ಶವ ನೀಲಹಳ್ಳಿ ಕೆರೆಯಲ್ಲಿ ದಿನಾಂಕ 11.02.2025 ರಂದು ದೊರೆತಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
ಮೃತ ಯುವತಿಯರು ಬುಡ್ಗಜಂಗಮ ಸಮುದಾಯದ ಸಾಯಮ್ಮ(15) ಮತ್ತು ಶ್ಯಾಮಮ್ಮ (19) ಎಂದು ಗುರುತಿಸಲಾಗಿದೆ.

ಕುಟುಂಬಸ್ಥರಿಂದ ಅತ್ಯಾಚಾರ ಮತ್ತು ಕೊಲೆಯ ಆರೋಪ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆ ಎಂದು ಆರೋಪಿಸಿದ್ದು ಈ ಆರೋಪಕ್ಕೆ ಪುಷ್ಟಿ ಕೊಡುವಂತೆ ಯುವತಿಯರ ಬಳಿ ಸಿಕ್ಕ ದೂರವಾಣಿ ಸಂಖ್ಯೆಗಳು, ಹಾಗೂ ಯಾರೋ ಅವರನ್ನು ಬೈಕ್ ನಲ್ಲಿ ಕರೆದುಕೊಂಡು ಹೋದರು ಎಂಬ ಹೇಳಿಕೆಗಳನ್ನು ಸ್ಥಳೀಯರು ನೀಡಿರುತ್ತಾರೆ.

ದಲಿತ ಪರ ಸಂಘಗಳಿಂದ ಪ್ರತಿಭಟನೆ.

ಈ ವಿಚಾರದ ಕುರಿತು ಕೆಲ ದಲಿತ ಪರ ಸಂಘಗಳು ತನಿಖೆ ನಡೆಸಿ ಆದಷ್ಟು ಬೇಗ ಅಪರಾಧಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿರುತ್ತಾರೆ. ಅಷ್ಟೇ ಅಲ್ಲದೆ ದಿನಾಂಕ 25.02.2025 ರಂದು ಬೆಂಗಳೂರು ಹಾಗೂ ಕಲಬುರ್ಗಿಯಲ್ಲೂ ಸಹ ದಲಿತಪರ ಸಂಘಗಳು ಪ್ರತಿಭಟನೆ ನಡೆಸಿರುತ್ತಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಡ್ಡಗೆರೆ ನಾಗರಾಜಯ್ಯ ಹಾಗೂ ಹಲವರು ಸೇರಿ ಪ್ರತಿಭಟನೆ ನಡೆಸಿದ್ದು ಚಿಂದಿ ಆಯುವ ಅಲೆಮಾರಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ವ್ಯಾಸಗಿ ಕೊಲೆ ಮಾಡಿರುವವರನ್ನು ಬಂಧಿಸಿ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತಾಯಿಸಿರುತ್ತಾರೆ.

ಪೊಲೀಸರ ಹೇಳಿಕೆ.

ಕೆರೆಯಲ್ಲಿ ಸಿಕ್ಕಿರುವ ಯುವತಿಯರ ಶವದ ಪ್ರಕರಣದ ಕುರಿತು ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು ತನಿಖೆ ನಡೆಸುತ್ತಿದ್ದೇವೆ ಈಗಲೇ ಹೆಚ್ಚಿನ ಮಾಹಿತಿಯನ್ನು ಒದಗಿಸಲು ಸಾಧ್ಯವಿಲ್ಲ ಎಫ್ ಎಸ್ ಎಲ್ ವರದಿಗಾಗಿ ನಿರೀಕ್ಷಿಸುತ್ತಿದ್ದೇವೆ ಅದು ಬಂದ ನಂತರ ಖಚಿತ ಮಾಹಿತಿಯನ್ನು ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿರುತ್ತಾರೆ.

nazeer ahamad

Recent Posts

ಕುಣಿಗಲ್‌ನಲ್ಲಿ ನವಜಾತ ಶಿಶು ಮಾರಾಟ ಆರೋಪ: ಅಂಗನವಾಡಿ ಕಾರ್ಯಕರ್ತೆ ಸಸ್ಪೆಂಡ್

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ ನವಜಾತ ಶಿಶುವಿನ ಮಾರಾಟಕ್ಕೆ ಮಧ್ಯಸ್ಥಿಕೆ ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ…

3 hours ago

ಶಿಕ್ಷಕರಿಂದ ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ: ಪ್ರಭಾರ ಮುಖ್ಯಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಪಟ್ಟಣ: ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಕೆ.ಎಚ್. ಗಿರೀಶ್ ವಿರುದ್ಧ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ…

4 hours ago

ಕನ್ನಡ ಮಾತಾಡಲು ಹೇಳಿದ ಕಂಡಕ್ಟರ್ ಮೇಲೆ ಹಲ್ಲೆ – ತಪ್ಪು ಕೇಸ್ ದಾಖಲಿಸಿದ ಸಿ.ಪಿ.ಐ ವರ್ಗಾವಣೆ

ಬೆಳಗಾವಿಯಲ್ಲಿ ಕನ್ನಡ ಭಾಷೆ ಬಳಸುವಂತೆ ಹೇಳಿದ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ, ಬಳಿಕ ಆತನ ವಿರುದ್ಧ…

5 hours ago

ಸೂಟ್‌ಕೇಸ್‌ನಲ್ಲಿ ಶವ ತುಂಬಿ ನದಿಗೆ ಎಸೆಯಲು ಯತ್: ತಾಯಿ-ಮಗಳು ಸ್ಥಳೀಯರ ಕೈಗೆ ಸಿಕ್ಕಿ ಬಂಧನ

ಕೋಲ್ಕತ್ತಾದ ಕುಮಾರ್ತುಲಿಯ ಗಂಗಾ ನದಿಯ ದಡದಲ್ಲಿ ಇಂದು ಬೆಳಗ್ಗೆ ಭೀಕರ ಘಟನೆ ಬೆಳಕಿಗೆ ಬಂದಿದೆ. ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ನದಿಗೆ…

6 hours ago

14 ಲಕ್ಷ ನಕಲಿ ನೋಟುಗಳು ವಶ: ಮೂವರು ಆರೋಪಿಗಳ ಬಂಧನ

ವಾಡಾ: ಇಲ್ಲಿನ ಪಾಲಿ ಗ್ರಾಮದ ಬಳಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ₹14 ಲಕ್ಷ ಮೌಲ್ಯದ ನಕಲಿ ನೋಟುಗಳು ವಶಪಡಿಸಿಕೊಳ್ಳಲಾಗಿದೆ. ಖಚಿತ…

8 hours ago

ತುಮಕೂರಿನಲ್ಲಿ ಶಿಶು ಮಾರಾಟ ಜಾಲ ಬಯಲಾಗಿದ್ದು, ಐವರು ಬಂಧನ

ತುಮಕೂರು ಜಿಲ್ಲೆಯಲ್ಲಿ ಶಿಶು ಮಾರಾಟ ಜಾಲ ಬೆಳಕಿಗೆ ಬಂದಿದ್ದು, ಈ ಸಂಬಂಧ ಐವರು ಪೊಲೀಸರ ವಶಕ್ಕೆ ಒಳಗಾಗಿದ್ದಾರೆ. ಫೆಬ್ರುವರಿ 20…

10 hours ago